Featured

ಹಾಸನ :  ಜೀಪ್ ಅಪಘಾತ: ಪ್ರೊಬೆಷನರಿ ಐಪಿಎಸ್ ಅಧಿಕಾರಿ ಸಾವು – vishwanews24

ಇಂದು DySP ಆಗಿ ಚಾರ್ಜ್‌ ತೆಗೆದುಕೊಳ್ಳಬೇಕಿದ್ದ ಅಪಘಾತದಲ್ಲಿ ಹರ್ಷವರ್ಧನ್ ದುರಂತ ಅಂತ್ಯ

ಹಾಸನ: ಚಾಲಕನ ನಿಯಂತ್ರ ತಪ್ಪಿ ಜೀಪ್ ರಸ್ತೆ ಬದಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷವರ್ಧನ್  (26) ಚಿಕಿತ್ಸೆ ಫಲಕಾರಿಯಾಗದೆ ರವಿವಾರ (ಡಿಸೆಂಬರ್​ 01) ರಾತ್ರಿ 9.30ರ ವೇಳೆಗೆ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ಜೀಪ್‌ ಪಲ್ಟಿಯಾಗಿತ್ತು. ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ​ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷಬರ್ಧನ್ ಕೊನೆಯುಸಿರು ಎಳೆದಿದ್ದಾರೆ.

ಮೂಲತಃ ಬಿಹಾರ ಮೂಲದ ಹರ್ಷಬರ್ಧನ ಮದ್ಯಪ್ರದೇಶದ ಸಿಂಗ್ರುಲಿಯಲ್ಲಿ ವಾಸವಾಗಿದ್ದರು. ಅಖಿಲೇಶ್ ಕುಮಾರ್ ಸಿಂಗ್ ಹಾಗೂ ಡೋಲಿ ಸಿಂಗ್ ದಂಪತಿಯ ಪುತ್ರ ಹರ್ಷವರ್ಧನ. ರಾಜ್ಯ ಆಡಳಿತ ಸೇವೆಯಲ್ಲಿರುವ ಸರ್ಕಾರಿ ನೌಕರನ ಮಗನಾಗಿದ್ದ ಹರ್ಷವರ್ಧನ್​ ಸಿವಿಲ್ ಇಂಜಿನಿಯರಿಂಗ್ ಪದವಿಧರರಾಗಿದ್ದರು. ಸರ್ಕಾರಿ ಕೆಲಸಕ್ಕೂ ಸೇರಿಕೊಂಡಿದ್ದರು. ಆದರೆ, ಜೀವನದ ಗುರಿ ಬೇರೆಯೇ ಆಗಿತ್ತು. 2022ರಲ್ಲಿ ಮೊದಲ ಯತ್ನದಲ್ಲೇ ಯುಪಿಎಸ್​​​ಸಿಯಲ್ಲಿ 153ನೇ ರ‍್ಯಾಂಕ್ ಪಡೆದಿದ್ದರು. ​

ಹರ್ಷವರ್ಧನ್​ ಅವರು ಇಲಾಖಾ ತರಬೇತಿ ಮುಗಿಸಿ ನಾಲ್ಕು ವಾರ ಮೈಸೂರಿನ ಪೊಲಿಸ್ ಅಕಾಡೆಮಿಯಲ್ಲಿ ಟ್ರೈನಿಂಗ್ ಮುಗಿಸಿದ್ದರು. ನಂತರ, ಅವರು ಹಾಸನ ಜಿಲ್ಲೆಗೆ ಡಿವೈಎಸ್​ಪಿಯಾಗಿ ನಿಯೋಜನೆಗೊಂಡಿದ್ದರು. ಹೀಗಾಗಿ ಹಾಸನ ಜಿಲ್ಲಾ ಎಸ್​ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಪೊಲೀಸ್ ಇಲಾಖೆಯ ಜೀಪ್​​ ಹತ್ತಿ ಮೈಸೂರಿನಿಂದ ಹಾಸನದತ್ತ ಬರುತ್ತಿದ್ದರು.

ಹಾಸನ ತಾಲ್ಲೂಕಿನ ಹಾಸನ ಮೈಸೂರು ರಸ್ತೆಯ ರಾಷ್ಟ್ರಿಯ ಹೆದ್ದಾರಿ 373ರ ಕಿತ್ತಾನೆಗಡಿ ಬಳಿ ಅತಿಯಾದ ವೇಗದಲ್ಲಿ ಬರುತ್ತಿದ್ದ ಜೀಪ್ ಸಂಜೆ 4:15ಕ್ಕೆ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದಿದ್ದು, ನಂತರ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಅಪಘಾತದಲ್ಲಿ ಹರ್ಷವರ್ಧನ್​ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೆ ಸ್ಥಳೀಯರು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರ ರಕ್ತಸ್ರಾವಾಗಿದ್ದರಿಂದ ಮತ್ತು ತಲೆಗೆ ಗಂಭಿರ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

9 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

10 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

10 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

10 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

11 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

11 hours ago