Featured

ಹಾಸನ :  ಜೀಪ್ ಅಪಘಾತ: ಪ್ರೊಬೆಷನರಿ ಐಪಿಎಸ್ ಅಧಿಕಾರಿ ಸಾವು – vishwanews24

ಇಂದು DySP ಆಗಿ ಚಾರ್ಜ್‌ ತೆಗೆದುಕೊಳ್ಳಬೇಕಿದ್ದ ಅಪಘಾತದಲ್ಲಿ ಹರ್ಷವರ್ಧನ್ ದುರಂತ ಅಂತ್ಯ

ಹಾಸನ: ಚಾಲಕನ ನಿಯಂತ್ರ ತಪ್ಪಿ ಜೀಪ್ ರಸ್ತೆ ಬದಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷವರ್ಧನ್  (26) ಚಿಕಿತ್ಸೆ ಫಲಕಾರಿಯಾಗದೆ ರವಿವಾರ (ಡಿಸೆಂಬರ್​ 01) ರಾತ್ರಿ 9.30ರ ವೇಳೆಗೆ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ಜೀಪ್‌ ಪಲ್ಟಿಯಾಗಿತ್ತು. ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ​ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷಬರ್ಧನ್ ಕೊನೆಯುಸಿರು ಎಳೆದಿದ್ದಾರೆ.

ಮೂಲತಃ ಬಿಹಾರ ಮೂಲದ ಹರ್ಷಬರ್ಧನ ಮದ್ಯಪ್ರದೇಶದ ಸಿಂಗ್ರುಲಿಯಲ್ಲಿ ವಾಸವಾಗಿದ್ದರು. ಅಖಿಲೇಶ್ ಕುಮಾರ್ ಸಿಂಗ್ ಹಾಗೂ ಡೋಲಿ ಸಿಂಗ್ ದಂಪತಿಯ ಪುತ್ರ ಹರ್ಷವರ್ಧನ. ರಾಜ್ಯ ಆಡಳಿತ ಸೇವೆಯಲ್ಲಿರುವ ಸರ್ಕಾರಿ ನೌಕರನ ಮಗನಾಗಿದ್ದ ಹರ್ಷವರ್ಧನ್​ ಸಿವಿಲ್ ಇಂಜಿನಿಯರಿಂಗ್ ಪದವಿಧರರಾಗಿದ್ದರು. ಸರ್ಕಾರಿ ಕೆಲಸಕ್ಕೂ ಸೇರಿಕೊಂಡಿದ್ದರು. ಆದರೆ, ಜೀವನದ ಗುರಿ ಬೇರೆಯೇ ಆಗಿತ್ತು. 2022ರಲ್ಲಿ ಮೊದಲ ಯತ್ನದಲ್ಲೇ ಯುಪಿಎಸ್​​​ಸಿಯಲ್ಲಿ 153ನೇ ರ‍್ಯಾಂಕ್ ಪಡೆದಿದ್ದರು. ​

ಹರ್ಷವರ್ಧನ್​ ಅವರು ಇಲಾಖಾ ತರಬೇತಿ ಮುಗಿಸಿ ನಾಲ್ಕು ವಾರ ಮೈಸೂರಿನ ಪೊಲಿಸ್ ಅಕಾಡೆಮಿಯಲ್ಲಿ ಟ್ರೈನಿಂಗ್ ಮುಗಿಸಿದ್ದರು. ನಂತರ, ಅವರು ಹಾಸನ ಜಿಲ್ಲೆಗೆ ಡಿವೈಎಸ್​ಪಿಯಾಗಿ ನಿಯೋಜನೆಗೊಂಡಿದ್ದರು. ಹೀಗಾಗಿ ಹಾಸನ ಜಿಲ್ಲಾ ಎಸ್​ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಪೊಲೀಸ್ ಇಲಾಖೆಯ ಜೀಪ್​​ ಹತ್ತಿ ಮೈಸೂರಿನಿಂದ ಹಾಸನದತ್ತ ಬರುತ್ತಿದ್ದರು.

ಹಾಸನ ತಾಲ್ಲೂಕಿನ ಹಾಸನ ಮೈಸೂರು ರಸ್ತೆಯ ರಾಷ್ಟ್ರಿಯ ಹೆದ್ದಾರಿ 373ರ ಕಿತ್ತಾನೆಗಡಿ ಬಳಿ ಅತಿಯಾದ ವೇಗದಲ್ಲಿ ಬರುತ್ತಿದ್ದ ಜೀಪ್ ಸಂಜೆ 4:15ಕ್ಕೆ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದಿದ್ದು, ನಂತರ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಅಪಘಾತದಲ್ಲಿ ಹರ್ಷವರ್ಧನ್​ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೆ ಸ್ಥಳೀಯರು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರ ರಕ್ತಸ್ರಾವಾಗಿದ್ದರಿಂದ ಮತ್ತು ತಲೆಗೆ ಗಂಭಿರ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ.

Vishwa News 24

Recent Posts

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  – vishwanews24

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…

42 minutes ago

ಬೆಂಗಳೂರು: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…

59 minutes ago

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago