Featured

ಹಾಸನ :  ಜೀಪ್ ಅಪಘಾತ: ಪ್ರೊಬೆಷನರಿ ಐಪಿಎಸ್ ಅಧಿಕಾರಿ ಸಾವು – vishwanews24

ಇಂದು DySP ಆಗಿ ಚಾರ್ಜ್‌ ತೆಗೆದುಕೊಳ್ಳಬೇಕಿದ್ದ ಅಪಘಾತದಲ್ಲಿ ಹರ್ಷವರ್ಧನ್ ದುರಂತ ಅಂತ್ಯ

ಹಾಸನ: ಚಾಲಕನ ನಿಯಂತ್ರ ತಪ್ಪಿ ಜೀಪ್ ರಸ್ತೆ ಬದಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷವರ್ಧನ್  (26) ಚಿಕಿತ್ಸೆ ಫಲಕಾರಿಯಾಗದೆ ರವಿವಾರ (ಡಿಸೆಂಬರ್​ 01) ರಾತ್ರಿ 9.30ರ ವೇಳೆಗೆ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ಜೀಪ್‌ ಪಲ್ಟಿಯಾಗಿತ್ತು. ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ​ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷಬರ್ಧನ್ ಕೊನೆಯುಸಿರು ಎಳೆದಿದ್ದಾರೆ.

ಮೂಲತಃ ಬಿಹಾರ ಮೂಲದ ಹರ್ಷಬರ್ಧನ ಮದ್ಯಪ್ರದೇಶದ ಸಿಂಗ್ರುಲಿಯಲ್ಲಿ ವಾಸವಾಗಿದ್ದರು. ಅಖಿಲೇಶ್ ಕುಮಾರ್ ಸಿಂಗ್ ಹಾಗೂ ಡೋಲಿ ಸಿಂಗ್ ದಂಪತಿಯ ಪುತ್ರ ಹರ್ಷವರ್ಧನ. ರಾಜ್ಯ ಆಡಳಿತ ಸೇವೆಯಲ್ಲಿರುವ ಸರ್ಕಾರಿ ನೌಕರನ ಮಗನಾಗಿದ್ದ ಹರ್ಷವರ್ಧನ್​ ಸಿವಿಲ್ ಇಂಜಿನಿಯರಿಂಗ್ ಪದವಿಧರರಾಗಿದ್ದರು. ಸರ್ಕಾರಿ ಕೆಲಸಕ್ಕೂ ಸೇರಿಕೊಂಡಿದ್ದರು. ಆದರೆ, ಜೀವನದ ಗುರಿ ಬೇರೆಯೇ ಆಗಿತ್ತು. 2022ರಲ್ಲಿ ಮೊದಲ ಯತ್ನದಲ್ಲೇ ಯುಪಿಎಸ್​​​ಸಿಯಲ್ಲಿ 153ನೇ ರ‍್ಯಾಂಕ್ ಪಡೆದಿದ್ದರು. ​

ಹರ್ಷವರ್ಧನ್​ ಅವರು ಇಲಾಖಾ ತರಬೇತಿ ಮುಗಿಸಿ ನಾಲ್ಕು ವಾರ ಮೈಸೂರಿನ ಪೊಲಿಸ್ ಅಕಾಡೆಮಿಯಲ್ಲಿ ಟ್ರೈನಿಂಗ್ ಮುಗಿಸಿದ್ದರು. ನಂತರ, ಅವರು ಹಾಸನ ಜಿಲ್ಲೆಗೆ ಡಿವೈಎಸ್​ಪಿಯಾಗಿ ನಿಯೋಜನೆಗೊಂಡಿದ್ದರು. ಹೀಗಾಗಿ ಹಾಸನ ಜಿಲ್ಲಾ ಎಸ್​ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಪೊಲೀಸ್ ಇಲಾಖೆಯ ಜೀಪ್​​ ಹತ್ತಿ ಮೈಸೂರಿನಿಂದ ಹಾಸನದತ್ತ ಬರುತ್ತಿದ್ದರು.

ಹಾಸನ ತಾಲ್ಲೂಕಿನ ಹಾಸನ ಮೈಸೂರು ರಸ್ತೆಯ ರಾಷ್ಟ್ರಿಯ ಹೆದ್ದಾರಿ 373ರ ಕಿತ್ತಾನೆಗಡಿ ಬಳಿ ಅತಿಯಾದ ವೇಗದಲ್ಲಿ ಬರುತ್ತಿದ್ದ ಜೀಪ್ ಸಂಜೆ 4:15ಕ್ಕೆ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದಿದ್ದು, ನಂತರ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಅಪಘಾತದಲ್ಲಿ ಹರ್ಷವರ್ಧನ್​ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೆ ಸ್ಥಳೀಯರು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರ ರಕ್ತಸ್ರಾವಾಗಿದ್ದರಿಂದ ಮತ್ತು ತಲೆಗೆ ಗಂಭಿರ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ.

Vishwa News 24

Recent Posts

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

16 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

16 hours ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

18 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

19 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

19 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

19 hours ago