Featured

ಹಾಸನ : ಡಿವೈಎಸ್‌ಪಿ ಬ್ಯಾಂಕ್ ಖಾತೆಗೆ ಕನ್ನ – 15 ಲಕ್ಷಕ್ಕೂ ಅಧಿಕ ಹಣ ಎಗರಿಸಿದ ಸೈಬರ್ ಕಳ್ಳರು – vishwanews24

ಹಾಸನ : ಡಿವೈಎಸ್‌ಪಿ ಬ್ಯಾಂಕ್ ಖಾತೆಗೆ ಕನ್ನ – 15 ಲಕ್ಷಕ್ಕೂ ಅಧಿಕ ಹಣ ಎಗರಿಸಿದ ಸೈಬರ್ ಕಳ್ಳರು

ಹಾಸನ: ಸಿನಿಮೀಯ ರೀತಿಯಲ್ಲಿ ಡಿವೈಎಸ್‌ಪಿ ಒಬ್ಬರ ಬ್ಯಾಂಕ್ ಖಾತೆಗೆ ಕನ್ನ ಹಾಕಿ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದಲೇ 15,98,761 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ. ಈ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಗೆ ಮುರಳೀಧರ್ ಅವರು ದೂರು ನೀಡಿದ್ದಾರೆ.

ಮಡಿಕೇರಿಯ ಕೆನರಾ ಬ್ಯಾಂಕ್  ಮುಖ್ಯಶಾಖೆ ಹಾಗೂ ಭಾಗಮಂಡಲದ ಕೆನರಾಬ್ಯಾಂಕ್‌ನ ಶಾಖೆಯಲ್ಲಿ ಪಿ.ಕೆ.ಮುರಳೀಧರ್ ಖಾತೆಗಳನ್ನು ಹೊಂದಿದ್ದಾರೆ.

ಮೇ 20 ರಂದು ಮಧ್ಯಾಹ್ನ 1:30ರ ವೇಳೆಗೆ ಡಿವೈಎಸ್‌ಪಿ ಅವರ ಮೊಬೈಲ್ ಸಂಖ್ಯೆಗೆ ಖಾಲಿ ಮೆಸೇಜ್‌ಗಳು ಬಂದಿವೆ. ಇದಾದ ನಂತರ ತಮ್ಮ ಗಮನಕ್ಕೇ ಬಾರದೇ ಬೇರೆ ಬೇರೆ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ. ಮಡಿಕೇರಿಯಲ್ಲಿರುವ ಕೆನರಾ ಬ್ಯಾಂಕ್ ಮುಖ್ಯಶಾಖೆ ಖಾತೆಯಿಂದ ಬೆಳಗ್ಗೆ 10.29 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಒಟ್ಟು 25 ವರ್ಗಾವಣೆಗಳ ಮೂಲಕ ಒಟ್ಟು 12,12,711 ರೂ. ಕೆನರಾಬ್ಯಾಂಕ್ ಭಾಗಮಂಡಲ ಶಾಖೆ ಖಾತೆಯಿಂದ ಬೆಳಿಗ್ಗೆ 10.28 ಗಂಟೆಯಿಂದ ಮಧ್ಯಾಹ್ನ 12.56 ಗಂಟೆವರೆಗೆ ಒಟ್ಟು 10 ವರ್ಗಾವಣೆ ಮೂಲಕ 3,88,050 ರೂ. ಎಗರಿಸಿದ್ದಾರೆ.

ಎರಡು ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು 15,98,761 ರೂ. ಹಣವನ್ನು ಸೈಬರ್ ಕಳ್ಳರು ಎಗರಿಸಿದ್ದಾರೆ. ಸದ್ಯ ಖದೀಮರನ್ನು ಪತ್ತೆ ಮಾಡಿ ತಮ್ಮ ಹಣ ವಾಪಸ್ ಕೊಡಿಸುವಂತೆ ಸೆನ್ ಪೊಲೀಸ್ ಠಾಣೆಗೆ ಡಿವೈಎಸ್‌ಪಿ ಬಿ.ಕೆ ಮುರುಳಿಧರ್ ದೂರು ನೀಡಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

18 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

18 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

18 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

18 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

18 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

19 hours ago