ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಸಂಚಲನ ಹುಟ್ಟಿಸಿರುವ ಹಾಸನ ಪೆನ್ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ ಎಚ್ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.
ಎಸ್ ಐ ಟಿ ಅಧಿಕಾರಿಗಳು ಸಿಎಂ, ಡಿಸಿಎಂ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಇಂತಹ ವಿಚಾರದಲ್ಲಿ ನಿಸ್ಸೀಮರು. ದೇವೇಗೌಡರು ಹಾಗೂ ತಾಯಿ ಆರೋಗ್ಯ ಹಿನ್ನೆಲೆಯಲ್ಲಿ ನಾನು ಮನೆಗೆ ಭೇಟಿ ಕೊಟ್ಟಿದ್ದೆ. ಆದರೆ ಎಚ್ ಡಿ ಕೆ, ರೇವಣ್ಣ ಕುಟುಂಬದ ಸಂಘಟಿತ ಪಾಪ ಕೃತ್ಯ ಎಂದು ಸಿಎಂ ಆರೋಪ ಮಾಡಿದ್ದಾರೆ. ಹೀಗಾದಾಗ ಈ ಪ್ರಕರಣದಲ್ಲಿ ನ್ಯಾಯ ಸಿಗಲು ಹೇಗೆ ಸಾಧ್ಯ? ನಾನು ದೇವೇಗೌಡರ ಬಳಿ ಯಾವ ವಕೀಲರನ್ನು ಕರೆದುಕೊಂಡು ಹೋಗಿದ್ದೇನೆ? ಎಂದು ಪ್ರಶ್ನಿಸಿದರು.
‘ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪೆನ್ ಡ್ರೈವ್ ಹಾಸನ ಜಿಲ್ಲೆಗೆ ಮಾತ್ರ ಸೀಮಿತ ಆಗಿರಲಿಲ್ಲ. ಪೊಲೀಸ್ ಅಧಿಕಾರಿಗಳನ್ನು ಇಟ್ಟುಕೊಂಡು ಹಂಚಿಕೆ ಮಾಡಿದ್ದಾರೆ. ಮಂಡ್ಯ, ಬೆಂಗಳೂರು ಗ್ರಾಮಾಂತರದಲ್ಲಿ ಮಾಡಿದ್ದಾರೆ. 22 ನೇ ತಾರೀಕು ಜೆಡಿಎಸ್ ಅಭ್ಯರ್ಥಿಯ ಚುನಾವಣಾ ಏಜೆಂಟ್ ಪೂರ್ಣಚಂದ್ರ ಏಪ್ರಿಲ್ 22 ರಂದು ಹಾಸನ ಡಿಸಿಗೆ ಪೆನ್ ಡ್ರೈವ್ ವಿಚಾರವಾಗಿ ದೂರನ್ನು ನೀಡಿದ್ದರು. ಪ್ರಜ್ವಲ್ ರೇವಣ್ಣ ವಿಡಿಯೋ ನೋಡಲು ವಾಟ್ಸಪ್ ಚಾನೆಲ್ ಹಿಂಬಾಲಿಸಿ ಎಂದು ಮೆಸೇಜ್ ಹರಿದಾಡಿತ್ತು. ನಾನು ಈ ವಿಚಾರವಾಗಿ ಯಾರನ್ನು ರಕ್ಷಣೆ ಮಾಡುವುದಿಲ್ಲ. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿರಲಿ ದೇಶದ ಕಠಿಣ ಕಾನೂನು ಪ್ರಕಾರ ಶಿಕ್ಷೆ ಆಗಲಿ. ಇದರಲ್ಲಿ ಯಾವುದೇ ರಾಜಿ ಇಲ್ಲ’ ಎಂದು ಎಚ್ಡಿಕೆ ಹೇಳಿದ್ದಾರೆ.
ನವೀನ್ ಗೌಡ ಎಂಬ ವ್ಯಕ್ತಿ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ. ನವೀನ್ ಗೌಡ, ಕಾರ್ತಿಕ್, ಪುಟ್ಟರಾಜು ವಿರುದ್ಧ ಪೂರ್ಣಚಂದ್ರ ಎಂಬುವವರು ದೂರು ಕೊಟ್ಟಿದ್ದರು. ಆದರೆ ಅವರ ವಿರುದ್ಧ ಯಾವುದೇ ಕ್ರಮ ಆಗಿಲ್ಲ. ಬೇರೆ ಪಕ್ಷದ ಕಾರ್ಯಕರ್ತರ ವಿರುದ್ಧ ಕೇಸ್ ಕೊಟ್ಟರೆ ತುರ್ತು ಕ್ರಮ ಕೈಗೊಳ್ಳಲಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಎಫ್ ಐ ಆರ್ ದಾಖಲಾದರೂ ಯಾವುದೇ ಕ್ರಮ ಆಗಿಲ್ಲ ಏಕೆ? ಎಂದು ಪ್ರಶ್ನಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…