ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಹೊಳೆನರಸೀಪುರದ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಸಂಬಂಧಿಸಿದ ಲೈಂಗಿಕ ಕಿರುಕುಳುಗಳ ಪ್ರಕರಣಗಳಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರ ಹೆಸರುಗಳನ್ನು ಬಳಸಬಾರದೆಂದು ನ್ಯಾಯಾಲಯ ಸೂಚಿಸಿದೆ.
ಹಾಸನನಲ್ಲಿ ಪೆನ್ ಡ್ರೈವ್ ಪ್ರಕರಣ ಬೆಳಕಿಗೆ ಬಂದ ನಂತರ ಹಾಸನದ ಸಂಸದ ಪ್ರಜ್ವಲ್ ರೇವಣ್ಣನವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಪುಂಖಾನುಪುಂಖವಾಗಿ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಲೈಂಗಿಕ ಕಿರುಕುಳದಿಂದ ನೊಂದಿರುವ ಸಂತ್ರಸ್ತರೊಬ್ಬರು ಪ್ರಜ್ವಲ್ ರೇವಣ್ಣ ಹಾಗೂ ಎಚ್ ಡಿ ರೇವಣ್ಣನವರ ವಿರುದ್ದ ಪ್ರಕರಣಗಳನ್ನೂ ದಾಖಲಿಸಿದ್ದಾರೆ. ಇದಾದ ನಂತರ, ರೇವಣ್ಣನವರ ವಿರುದ್ಧ ಸಂತ್ರಸ್ಥ ಮಹಿಳೆಯೊಬ್ಬರ ಅಪಹರಣದ ಕೇಸ್ ಕೂಡ ದಾಖಲಾಗಿದೆ. ಮತ್ತೊಂದೆಡೆ, ಈ ಪ್ರಕರಣದ ತನಿಖೆಯ ಹೊಣೆ ಹೊತ್ತಿರುವ ಎಸ್ಐಟಿಯಿಂದ ಸಂತ್ರಸ್ಥೆಯರಿಂದ ಹೇಳಿಕೆಗಳನ್ನು ಪಡೆಯಲಾಗುತ್ತಿದೆ.
ಈ ಎಲ್ಲಾ ಪ್ರಕರಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಬಿತ್ತರವಾಗುವ ಸುದ್ದಿಗಳಲ್ಲಿ ಹಲವಾರು ಕಡೆ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ಎಂತಲೂ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪುತ್ರ ಎಚ್ ಡಿ ರೇವಣ್ಣ ಎಂತಲೂ ಬಳಕೆಯಾಗಿದೆ. ಪ್ರಜ್ವಲ್ ಪ್ರಕರಣದಲ್ಲಿ ದೇವೇಗೌಡರ ಮೊಮ್ಮಗ ಎಂದೇ ಹಲವಾರು ಕಡೆ ಪ್ರಕಟಿಸಲಾಗಿದೆ. ವಿಶೇಷವಾಗಿ ಉತ್ತರ ಭಾರತೀಯ ಮಾಧ್ಯಮಗಳಲ್ಲಿ ಹಾಗೂ ವಿದೇಶಿ ಮಾಧ್ಯಮಗಳಲ್ಲಿ ದೇವೇಗೌಡರ ಹೆಸರನ್ನು ಎಗ್ಗಿಲ್ಲದೆ ಬಳಸಲಾಗಿದೆ.
ಈ ಎಲ್ಲಾ ಬೆಳವಣಿಗೆಗಳಿಂದ ಮಾನಸಿಕವಾಗಿ ನೊಂದಿರುವ ದೇವೇಗೌಡರ ಕುಟುಂಬ, ನ್ಯಾಯಾಲಯದ ಮೊರೆ ಹೋಗಿ ತಮ್ಮ ಹೆಸರುಗಳನ್ನು ಬಳಸದಂತೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿತ್ತು. ಆ ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಥಳೀಯ ನ್ಯಾಯಾಲಯ ಈ ಕುರಿತಂತೆ ನಿರ್ದೇಶನ ನೀಡಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…