ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಹೊಳೆನರಸೀಪುರದ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಸಂಬಂಧಿಸಿದ ಲೈಂಗಿಕ ಕಿರುಕುಳುಗಳ ಪ್ರಕರಣಗಳಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರ ಹೆಸರುಗಳನ್ನು ಬಳಸಬಾರದೆಂದು ನ್ಯಾಯಾಲಯ ಸೂಚಿಸಿದೆ.
ಹಾಸನನಲ್ಲಿ ಪೆನ್ ಡ್ರೈವ್ ಪ್ರಕರಣ ಬೆಳಕಿಗೆ ಬಂದ ನಂತರ ಹಾಸನದ ಸಂಸದ ಪ್ರಜ್ವಲ್ ರೇವಣ್ಣನವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಪುಂಖಾನುಪುಂಖವಾಗಿ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಲೈಂಗಿಕ ಕಿರುಕುಳದಿಂದ ನೊಂದಿರುವ ಸಂತ್ರಸ್ತರೊಬ್ಬರು ಪ್ರಜ್ವಲ್ ರೇವಣ್ಣ ಹಾಗೂ ಎಚ್ ಡಿ ರೇವಣ್ಣನವರ ವಿರುದ್ದ ಪ್ರಕರಣಗಳನ್ನೂ ದಾಖಲಿಸಿದ್ದಾರೆ. ಇದಾದ ನಂತರ, ರೇವಣ್ಣನವರ ವಿರುದ್ಧ ಸಂತ್ರಸ್ಥ ಮಹಿಳೆಯೊಬ್ಬರ ಅಪಹರಣದ ಕೇಸ್ ಕೂಡ ದಾಖಲಾಗಿದೆ. ಮತ್ತೊಂದೆಡೆ, ಈ ಪ್ರಕರಣದ ತನಿಖೆಯ ಹೊಣೆ ಹೊತ್ತಿರುವ ಎಸ್ಐಟಿಯಿಂದ ಸಂತ್ರಸ್ಥೆಯರಿಂದ ಹೇಳಿಕೆಗಳನ್ನು ಪಡೆಯಲಾಗುತ್ತಿದೆ.
ಈ ಎಲ್ಲಾ ಪ್ರಕರಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಬಿತ್ತರವಾಗುವ ಸುದ್ದಿಗಳಲ್ಲಿ ಹಲವಾರು ಕಡೆ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ಎಂತಲೂ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪುತ್ರ ಎಚ್ ಡಿ ರೇವಣ್ಣ ಎಂತಲೂ ಬಳಕೆಯಾಗಿದೆ. ಪ್ರಜ್ವಲ್ ಪ್ರಕರಣದಲ್ಲಿ ದೇವೇಗೌಡರ ಮೊಮ್ಮಗ ಎಂದೇ ಹಲವಾರು ಕಡೆ ಪ್ರಕಟಿಸಲಾಗಿದೆ. ವಿಶೇಷವಾಗಿ ಉತ್ತರ ಭಾರತೀಯ ಮಾಧ್ಯಮಗಳಲ್ಲಿ ಹಾಗೂ ವಿದೇಶಿ ಮಾಧ್ಯಮಗಳಲ್ಲಿ ದೇವೇಗೌಡರ ಹೆಸರನ್ನು ಎಗ್ಗಿಲ್ಲದೆ ಬಳಸಲಾಗಿದೆ.
ಈ ಎಲ್ಲಾ ಬೆಳವಣಿಗೆಗಳಿಂದ ಮಾನಸಿಕವಾಗಿ ನೊಂದಿರುವ ದೇವೇಗೌಡರ ಕುಟುಂಬ, ನ್ಯಾಯಾಲಯದ ಮೊರೆ ಹೋಗಿ ತಮ್ಮ ಹೆಸರುಗಳನ್ನು ಬಳಸದಂತೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿತ್ತು. ಆ ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಥಳೀಯ ನ್ಯಾಯಾಲಯ ಈ ಕುರಿತಂತೆ ನಿರ್ದೇಶನ ನೀಡಿದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…