Featured

ಹಾಸನ ಪೆನ್ ಡ್ರೈವ್ ಪ್ರಕರಣ –  ಉಪ್ಪು ತಿಂದವನು ನೀರು ಕುಡಿಯಲೇಬೇಕು  :  ಎಚ್ ಡಿ ಕುಮಾರಸ್ವಾಮಿ – Vishwanews24

ಹಾಸನ ಪೆನ್‌ಡ್ರೈವ್ ಪ್ರಕರಣ –  ಉಪ್ಪು ತಿಂದವನು ನೀರು ಕುಡಿಯಲೇಬೇಕು  :  ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ, ಇನ್ನು ಈ ಬಗ್ಗೆ ಪ್ರಜ್ವಲ್ ರೇವಣ್ಣ ಅವರ ಚಿಕ್ಕಪ್ಪ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ್ದು, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾನಾಗಲಿ ದೇವೇಗೌಡರಾಗಲಿ ಎಂದೂ ಸಹ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ಪರಿಹರಿಸಿ ಕಳುಹಿಸಿದ್ದೇವೆ. ನಾವಂತೂ ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಗೌರವ ನೀಡಿದ್ದೇವೆ ಎಂದು ಹೇಳಿದರು.

ಈ ಬಗ್ಗೆ ಎಸ್ಐಟಿ ತನಿಖೆಗೆ ಈಗಾಗಲೇ ಸರ್ಕಾರ ಆದೇಶ ಮಾಡಿದೆ. ಎಸ್‌ಐಟಿ ತನಿಖೆಯಿಂದ ವಾಸ್ತವಾಂಶ ಹೊರಗೆ ಬರಲಿ. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರು ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ನಾವಂತೂ ಯಾವುದಕ್ಕೂ ತಪ್ಪು ಮಾಡಿದ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ. ತನಿಖೆಯ ವರದಿ ಸಂಪೂರ್ಣ ಹೊರಗೆ ಬರಲಿ ಬಂದ ನಂತರ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

19 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

19 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

19 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

19 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

20 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

20 hours ago