ಹಾಸನ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬನಿಗೆ ಮರದ ಕೊಂಬೆ ಬಡಿದು ಮೃತಪಟ್ಟ ಘಟನೆ ಬೇಲೂರಿನ ನಿಡಗೋಡು ಗ್ರಾಮದ ಬಳಿ ನಡೆದಿದೆ.
ಬೇಲೂರಿನಿಂದ – ಮಂಗಳೂರು ಕಡೆಗೆ ಕೆಎ-45 ಎಫ್-0033 ನಂಬರ್ನ ಸಾರಿಗೆ ಬಸ್ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ಬಂದ ಟಿಪ್ಪರ್ಗೆ ದಾರಿ ಬಿಡುವಾಗ ಈ ದುರ್ಘಟನೆ ಸಂಭವಿಸಿದೆ. ಮೃತನ ಗುರುತು ಪತ್ತೆಯಾಗಿಲ್ಲ. ವ್ಯಕ್ತಿಯ ಮೃತದೇಹವನ್ನು ಬೇಲೂರಿನ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಗ್ರಾಮದ ರಸ್ತೆ ಬದಿಯಲ್ಲಿಯೇ ಬೃಹತ್ ಗಾತ್ರದ ಹಲವಾರು ಮರಗಳಿವೆ. ಈ ರೀತಿಯಲ್ಲಿಯೇ ಮೂರ್ನಾಲ್ಕು ಸಾವುಗಳು ಸಂಭವಿಸಿವೆ. ಮರಗಳನ್ನು ತೆರವುಗೊಳಿಸುವಂತೆ ಮನವಿ ಮಾಡಿದ್ದರು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಮರಗಳನ್ನು ತೆರವುಗೊಳಿಸಬೇಕು ಇಲ್ಲವಾದಲ್ಲಿ ರಸ್ತೆ ಬಂದ್ ಮಾಡಿ ಮರ ತೆರವು ಮಾಡುವುದಾಗಿ ಸ್ಥಳೀಯರ ಎಚ್ಚರಿಕೆ ನೀಡಿದ್ದಾರೆ.
ಸ್ಥಳಕ್ಕೆ ಬೇಲೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…