ಹಾಸನ: ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರೆ ಮಂಗಳವಾರ ನಡೆದಿದ್ದು, ಈ ಸಂದರ್ಭದಲ್ಲಿ ವಾರ್ಷಿಕವಾಗಿ ನಡೆಯುವ ಗೌರವ ವಂದನೆ ಸ್ವೀಕಾರ ಸಂಪ್ರದಾಯವನ್ನು ಪಾಲನೆ ಮಾಡಲಾಗಿದೆ. ಸಾಮಾನ್ಯವಾಗಿ ಈ ವೇಳೆ ಕುರಾನ್ ಪಠಣ ನಡೆಸುತ್ತಿದ್ದರೂ ಈ ಬಾರಿ ಮುಸ್ಲಿಂ ಖಾಜಿಗಳು ಕೇವಲ ಶ್ಲೋಕ ಪಠಣಕ್ಕೆ ಸೀಮಿತಗೊಳಿಸಿದ್ದಾರೆ. ಈ ವೇಳೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಜೋರಾಗಿ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದ್ದಾರೆ.
ಬೆಳಗ್ಗೆ ಸುಮಾರು 10:50ಕ್ಕೆ ವಾಡಿಕೆಯಂತೆ ಖಾಜ ಸಾಹೇಬರು ದೇವಸ್ಥಾನದ ಮೂಲೆಯ ಮೆಟ್ಟಿಲ ಮೇಲೆ ಶ್ಲೋಕ ಪಠಿಸಿದ ನಂತರ ತೇರು ಎಳೆಯಲಾಯಿತು. ಈ ವೇಳೆ ಸ್ಥಳೀಯ ಶಾಸಕ ಕೆಎಸ್ ಲಿಂಗೇಶ್, ಮಾಜಿ ಸಚಿವ ಹೆಚ್ಡಿ ರೇವಣ್ಣ, ದೇವಸ್ಥಾನದ ಆಡಳಿತಾಧಿಕಾರಿ ವಿದ್ಯುಲ್ಲತಾ, ಸೇರಿದಂತೆ ಸಹಸ್ರಾರು ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು.
ಕುರಾನ್ ಪಠಣ ವಿವಾದದಿಂದ ಚನ್ನಕೇಶವಸ್ವಾಮಿ ರಥೋತ್ಸವಕ್ಕೆ ಹಲವು ಅಡಚಣೆಗಳು ಎದುರಾಗಿದ್ದವು. ಇದರ ನಡುವೆಯೂ ಮಂಗಳವಾರದಿಂದ ಜಾತ್ರಾ ಮಹೋತ್ಸವ ಆರಂಭವಾಗಿದೆ. ರಥೋತ್ಸವದ ವೇಳೆ ಕುರಾನ್ ಪಠಣ ಮಾಡದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜೈ ಶ್ರೀರಾಮ್ ಘೋಷಣೆ ಕೂಗಿದರು.
ಸೋಮವಾರ ಸಂಜೆ ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಕುರಾನ್ ಪಠಣ ಮಾಡುವ ಸುತ್ತಲೂ ಬ್ಯಾರಿಕೇಡ್ ಹಾಕಿ ಅರೆ ಮಿಲಿಟರಿ ಕಾರ್ಯಪಡೆ ಹಾಗೂ ಪೊಲೀಸರನ್ನು ನಿಯೋಜಿಸಲಾಗಿತ್ತು. ಪ್ರತಿ ವರ್ಷ ರಥದ ಮುಂದೆ ಕುರಾನ್ ಪಠಣ ಮಾಡಲಾಗುತ್ತಿತ್ತು. ಆದರೆ ಈ ಭಾರಿ ವಿರೋಧ ವ್ಯಕ್ತವಾದ್ದರಿಂದ ದೇವಾಲಯದ ಹೊರಭಾಗದ ಮೂಲೆಯಲ್ಲಿ ಮೆಟ್ಟಿಲ ಮೇಲೆ ಬೇಲೂರು ತಾಲೂಕಿನ ದೊಡ್ಡ ಮೇದೂರು ಗ್ರಾಮದ ಸಯ್ಯದ್ ಸಜ್ಜಾದ್ ಭಾಷಾ ಖಾದ್ರಿ ಶ್ಲೋಕ ಓದಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…