ಹಾಸನ: ಡೆಂಗ್ಯೂ ಮಹಾಮಾರಿ ಎಂಬಿಬಿಎಸ್ ವಿದ್ಯಾರ್ಥಿಯನ್ನು ಬಲಿಪಡೆದಿದೆ. ಮೃತನನ್ನು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿ, ಹೊಳೆನರಸೀಪುರ ತಾಲ್ಲೂಕಿನ, ಹಳ್ಳಿಮೈಸೂರು ಹೋಬಳಿ, ಗೋಹಳ್ಳಿ ಗ್ರಾಮದ ರೇಖಾ ಮತ್ತು ಮಂಜುನಾಥ್ ದಂಪತಿಯ ಪುತ್ರ ಕುಶಾಲ್ (22) ಎಂದು ಗುರುತಿಸಲಾಗಿದೆ.
ಕಳೆದ ಒಂದು ವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಶಾಲ್ ಗುರುವಾರ ಸಂಜೆ ಸಾವನ್ನಪ್ಪಿದ್ದಾನೆ.
ಡೆಂಗ್ಯೂ ಸೋಂಕಿತನಾಗಿ ಜ್ವರದಿಂದ ಬಳಲುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ ಇವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಗುಣವಾಗದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರತಿಭಾನ್ವಿತ, ಬಡ ವಿದ್ಯಾರ್ಥಿಯಾಗಿದ್ದ ಕುಶಾಲ್ ಹಾಸನದ ಹಿಮ್ಸ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದರು.
ಕುಶಾಲ್ ತಾಯಿ, ಟೈಲರ್ ವೃತ್ತಿಯಲ್ಲಿದ್ದು, ಅವರೂ ಕೂಡ ಡೆಂಗ್ಯೂ ಸೋಂಕಿನಿಂದ ಬಳಲುತ್ತಿದ್ದಾರೆ. ಆವರೂ ಕೂಡ ಆಸ್ಪತ್ರೆಯಲ್ಲೇ ಒಳರೋಗಿಯಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…