ಹಾಸನ: ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ.
ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನ ಕೆ.ವಿ (21) ಮೃತ ವಿದ್ಯಾರ್ಥಿನಿ. ಕವನ ಹಾಸನ ನಗರದ ಎಂ.ಜಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು. ಮೂರು ವಿಷಯಗಳ ಪರೀಕ್ಷೆ ಬರೆದಿದ್ದ ಕವನ ಇನ್ನೂ ಮೂರು ಪರೀಕ್ಷೆಗಳನ್ನು ಬರೆಯಬೇಕಿತ್ತು. ಸಂಜೆ ಮನೆಗೆ ನೀರು ತಂದ ಕವನಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ಕವನ ತಾಯಿ ಬಳಿ ಕುಡಿಯಲು ನೀರು ಕೇಳಿದ್ದಾಳೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಕವನ ಮನೆಯಲ್ಲಿಯೇ ಕುಸಿದು ಬಿದ್ದಿದ್ದಳು.
ಕೂಡಲೇ ಪೋಷಕರು ಆಕೆಯನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲಾಗಲೇ ಕವನ ಕೊನೆಯುಸಿರೆಳೆದಿದ್ದಳು. ಸದ್ಯ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಸಹಪಾಠಿಗಳು ಹಾಗೂ ಕಾಲೇಜು ಉಪನ್ಯಾಸಕ ವರ್ಗದಲ್ಲಿಯೂ ಶೋಕ ಮಡುಗಟ್ಟಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…