Featured

ಹಾಸನ : ಹೃದಯಾಘಾತದಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಸಾವು – vishwanews24

ಹಾಸನ : ಹೃದಯಾಘಾತದಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಸಾವು

ಹಾಸನ: ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ  ಸಾವನ್ನಪ್ಪಿದ ಘಟನೆ ಹಾಸನ  ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ.

ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನ ಕೆ.ವಿ (21) ಮೃತ ವಿದ್ಯಾರ್ಥಿನಿ. ಕವನ ಹಾಸನ ನಗರದ ಎಂ.ಜಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು. ಮೂರು ವಿಷಯಗಳ ಪರೀಕ್ಷೆ ಬರೆದಿದ್ದ ಕವನ ಇನ್ನೂ ಮೂರು ಪರೀಕ್ಷೆಗಳನ್ನು ಬರೆಯಬೇಕಿತ್ತು. ಸಂಜೆ ಮನೆಗೆ ನೀರು ತಂದ ಕವನಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ಕವನ ತಾಯಿ ಬಳಿ ಕುಡಿಯಲು ನೀರು ಕೇಳಿದ್ದಾಳೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಕವನ ಮನೆಯಲ್ಲಿಯೇ ಕುಸಿದು ಬಿದ್ದಿದ್ದಳು.

ಕೂಡಲೇ ಪೋಷಕರು ಆಕೆಯನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲಾಗಲೇ ಕವನ ಕೊನೆಯುಸಿರೆಳೆದಿದ್ದಳು. ಸದ್ಯ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಸಹಪಾಠಿಗಳು ಹಾಗೂ ಕಾಲೇಜು ಉಪನ್ಯಾಸಕ ವರ್ಗದಲ್ಲಿಯೂ ಶೋಕ ಮಡುಗಟ್ಟಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago