ಹಾಸನ : ಇತ್ತೀಚಿನ ದಿನಗಳಲ್ಲಿ ಮದುವೆ ಅಂದಾಗ ಬ್ಯೂಟಿಪಾರ್ಲರ್ಗಳಿಗೆ ತೆರಳದವರೇ ಇಲ್ಲ. ಮದುವೆ ದಿನ ವಧು ಚೆನ್ನಾಗಿ ಕಾಣಿಸಬೇಕೆಂದು ಎಗ್ಗಿಲ್ಲದ ಸರ್ಕಸ್ ಮಾಡ್ತಾರೆ. ಅದಕ್ಕಾಗಿ ಪಾರ್ಲರ್ಗೆ ತೆರಳಿ ಮುಖವನ್ನು ಅಂದಗೊಳಿಸಲು ಹೋಗಿ ಮುಖವೇ ವಿರೂಪಗೊಂಡು ಮದುವೆ ಕ್ಯಾನ್ಸಲ್ ಆದ ದುರಂತ ಘಟನೆ ಹಾಸನದ ಅರಸೀಕೆರೆಯಲ್ಲಿ ನಡೆದಿದೆ.
ಮದುವೆಗಾಗಿ ನಗರದ ಗಂಗಾಶ್ರೀ ಹರ್ಬಲ್ ಬ್ಯೂಟಿ ಪಾರ್ಲರ್ ಅಂಡ್ ಸ್ಪಾನಲ್ಲಿ ಮೇಕಪ್ ಮಾಡಿಸಿಕೊಂಡಿದ್ದ ಯುವತಿಗೆ ಈ ದುರ್ಗತಿ ಎದುರಾಗಿದೆ
ಮದುವೆಯಾಗಬೇಕಿದ್ದ ವಧು ದುರ್ಗತಿ ಎಂಬಾಕೆ ಹೊಸ ಮಾದರಿಯ ಮೇಕಪ್ ಮಾಡಿಯಲು ಹೋಗಿ ಯಡವಟ್ಟು ಮಾಡಿಕೊಂಡಿದ್ದು, ಮೇಕಪ್ ಮಾಡುವುದಾಗಿ ಹೇಳಿ ಸ್ಟೀಮ್ ತೆಗೆದುಕೊಂಡಿದ್ದು. ಇದಾದ ಬಳಿಕ ವಧುವಿನ ಮುಖ ಊದಿಕೊಂಡು, ಸುಟ್ಟಂತೆ ಕಪ್ಪಾಗಿದೆ. ಯುವತಿಯ ಮುಖ ನೋಡಿ ಮದುವೆಯಾಗಲು ವರ ಹಾಗೂ ವರನ ಕುಟುಂಬ ನಿರಾಕರಿಸಿದ್ದು, ಮದುವೇ ಕ್ಯಾನ್ಸಲ್ ಆಗಿದ್ದು ವಧುನಿನ ಕುಟುಂಬಸ್ಥರು ಬೇಸರಗೊಂಡು ಕಂಗಾಲಾಗಿದ್ದಾರೆ.
ಮುಖವನ್ನು ಕಂಡ ಯುವತಿ ಬೆಚ್ಚಿಬಿದ್ದಿದ್ದಾಳೆ. ನಗರದ ಬ್ಯೂಟಿಪಾರ್ಲರ್ ಮಾಲೀಕರಾದ ಗಂಗಾ ಎಂಬುವರ ಪಾರ್ಲರ್ನಲ್ಲಿ ಈ ಘಟನೆ ನಡೆದಿದ್ದು, ವಧುವಿನ ಕುಟುಂಬಸ್ಥರು ಅವಘಡದ ಕುರಿತು ಅರಸೀಕೆರೆ ನಗರ ಪೊಲೀಸರು ದೂರು ನೀಡಿದ್ದು,ಮಾಲೀಕರಾದ ಗಂಗಾ ಅವರನ್ನು ವಿಚಾರಣೆ ನಡೆಸಿದ್ದಾರೆ ಮುಂದಿನ ದಿನಗಳಲ್ಲಿ ಕ್ರಮಕೈಗೊಳ್ಳುವ ಸಾಧ್ಯತೆಯಿದೆ.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…