Featured

ಹಾಸ್ಯನಟ ದೊಡ್ಡಣ್ಣ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ರಾಯಚೂರು: ಸ್ಯಾಂಡಲ್‍ವುಡ್ ನ ಹಿರಿಯ ಚಿತ್ರನಟ ದೊಡ್ಡಣ್ಣ ಅಸ್ವಸ್ಥರಾಗಿದ್ದು, ಅವರನ್ನು ರಾಯಚೂರಿನ ಶಕ್ತಿನಗರದ ಕೆಪಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ರಾಯಚೂರು ಸಮೀಪದ ದೇವಸಗೂರಿನಲ್ಲಿರುವ ಸೂಗೂರೇಶ್ವರ ದೇವಸ್ಥಾನಕ್ಕೆ ನಟ ದೊಡ್ಡಣ್ಣ ಬಂದಿದ್ದರು. ಈ ವೇಳೆ ಚಳಿ ಜ್ವರದಿಂದ ಬಳಲುತ್ತಿದ್ದು, ನಟ ದೊಡ್ಡಣ್ಣ ತಾವು ಉಳಿದುಕೊಂಡಿದ್ದ ವಸತಿ ಗೃಹದ ಬಾತ್ ರೂಮ್‍ನಲ್ಲಿ ಲೋ ಬಿಪಿಯಾಗಿದ್ದರಿಂದ ಕುಸಿದು ಬಿದ್ದಿದ್ದರು.

ಕೂಡಲೇ ಅವರನ್ನು ರಾಯಚೂರಿನ ಶಕ್ತಿನಗರದ ಕೆಪಿಸಿ ಆಸ್ಪತ್ರೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯ ಡಾ.ರಮೇಶ್ ಜಗ್ಲಿ ಅವರು ಚಿಕಿತ್ಸೆ ನೀಡಿದ್ದಾರೆ. ಆದರೆ ದೊಡ್ಡಣ್ಣ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಕ್ತಿನಗರದ ಆಸ್ಪತ್ರೆಯಿಂದ ಅಂಬುಲೆನ್ಸ್ ಮೂಲಕ ದೊಡ್ಡಣ್ಣ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ.

ದೇವಸಗೂರಿನಲ್ಲಿರುವ ಸೂಗೂರೇಶ್ವರ ಅವರ ಮನೆಯ ದೇವರಾಗಿದ್ದರಿಂದ ಸೋಮವಾರ ದೊಡ್ಡಣ್ಣ ಅವರ ಕುಟುಂಬದಬರ ಜೊತೆ ಸೋಮವಾರ ಬಂದಿದ್ದರು. ಶ್ರಾವಣವಾಗಿದ್ದರಿಂದ ವಿಶೇಷ ಪೂಜೆ ಮಾಡಿಸಿ ಶಕ್ತಿನಗರದ ವಸತಿ ಗೃಹದಲ್ಲಿ ತಂಗಿದ್ದರು. ನಿನ್ನೆಯೂ ಕೂಡ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದು, ಲೋ ಬಿಪಿಯಿಂದಾಗಿ ಬಾತ್‍ರೂಮಿನಲ್ಲಿ ಕುಸಿದು ಬಿದ್ದಿದ್ದರು. ಇಂದು ಬೆಳಗ್ಗೆ ಶಕ್ತಿನಗರದ ಕೆಪಿಸಿ ಆಸ್ಪತ್ರೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 45 ನಿಮಿಷ ಚಿಕಿತ್ಸೆ ಪಡೆದು ಈಗ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಕೂಡಲೇ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ.

ದೊಡ್ಡಣ್ಣ ಅವರಿಗೆ ಲೋ ಬಿಪಿ ಆಗಿದ್ದು, ಕುಸಿದು ಬಿದ್ದಿದ್ದಾರೆ. ಈ ಆಸ್ಪತ್ರೆಯಲ್ಲಿ ಸರಿಯಾದ ಸೌಲಭ್ಯವಿಲ್ಲ. ಆದ್ದರಿಂದ ಉತ್ತಮ ಚಿಕಿತ್ಸೆ ನೀಡುವ ಸಲುವಾಗಿ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

2 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago