Featured

ಹಾಸ್ಯನಟ ದೊಡ್ಡಣ್ಣ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ರಾಯಚೂರು: ಸ್ಯಾಂಡಲ್‍ವುಡ್ ನ ಹಿರಿಯ ಚಿತ್ರನಟ ದೊಡ್ಡಣ್ಣ ಅಸ್ವಸ್ಥರಾಗಿದ್ದು, ಅವರನ್ನು ರಾಯಚೂರಿನ ಶಕ್ತಿನಗರದ ಕೆಪಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ರಾಯಚೂರು ಸಮೀಪದ ದೇವಸಗೂರಿನಲ್ಲಿರುವ ಸೂಗೂರೇಶ್ವರ ದೇವಸ್ಥಾನಕ್ಕೆ ನಟ ದೊಡ್ಡಣ್ಣ ಬಂದಿದ್ದರು. ಈ ವೇಳೆ ಚಳಿ ಜ್ವರದಿಂದ ಬಳಲುತ್ತಿದ್ದು, ನಟ ದೊಡ್ಡಣ್ಣ ತಾವು ಉಳಿದುಕೊಂಡಿದ್ದ ವಸತಿ ಗೃಹದ ಬಾತ್ ರೂಮ್‍ನಲ್ಲಿ ಲೋ ಬಿಪಿಯಾಗಿದ್ದರಿಂದ ಕುಸಿದು ಬಿದ್ದಿದ್ದರು.

ಕೂಡಲೇ ಅವರನ್ನು ರಾಯಚೂರಿನ ಶಕ್ತಿನಗರದ ಕೆಪಿಸಿ ಆಸ್ಪತ್ರೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯ ಡಾ.ರಮೇಶ್ ಜಗ್ಲಿ ಅವರು ಚಿಕಿತ್ಸೆ ನೀಡಿದ್ದಾರೆ. ಆದರೆ ದೊಡ್ಡಣ್ಣ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಕ್ತಿನಗರದ ಆಸ್ಪತ್ರೆಯಿಂದ ಅಂಬುಲೆನ್ಸ್ ಮೂಲಕ ದೊಡ್ಡಣ್ಣ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ.

ದೇವಸಗೂರಿನಲ್ಲಿರುವ ಸೂಗೂರೇಶ್ವರ ಅವರ ಮನೆಯ ದೇವರಾಗಿದ್ದರಿಂದ ಸೋಮವಾರ ದೊಡ್ಡಣ್ಣ ಅವರ ಕುಟುಂಬದಬರ ಜೊತೆ ಸೋಮವಾರ ಬಂದಿದ್ದರು. ಶ್ರಾವಣವಾಗಿದ್ದರಿಂದ ವಿಶೇಷ ಪೂಜೆ ಮಾಡಿಸಿ ಶಕ್ತಿನಗರದ ವಸತಿ ಗೃಹದಲ್ಲಿ ತಂಗಿದ್ದರು. ನಿನ್ನೆಯೂ ಕೂಡ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದು, ಲೋ ಬಿಪಿಯಿಂದಾಗಿ ಬಾತ್‍ರೂಮಿನಲ್ಲಿ ಕುಸಿದು ಬಿದ್ದಿದ್ದರು. ಇಂದು ಬೆಳಗ್ಗೆ ಶಕ್ತಿನಗರದ ಕೆಪಿಸಿ ಆಸ್ಪತ್ರೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 45 ನಿಮಿಷ ಚಿಕಿತ್ಸೆ ಪಡೆದು ಈಗ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಕೂಡಲೇ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ.

ದೊಡ್ಡಣ್ಣ ಅವರಿಗೆ ಲೋ ಬಿಪಿ ಆಗಿದ್ದು, ಕುಸಿದು ಬಿದ್ದಿದ್ದಾರೆ. ಈ ಆಸ್ಪತ್ರೆಯಲ್ಲಿ ಸರಿಯಾದ ಸೌಲಭ್ಯವಿಲ್ಲ. ಆದ್ದರಿಂದ ಉತ್ತಮ ಚಿಕಿತ್ಸೆ ನೀಡುವ ಸಲುವಾಗಿ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago