ಪುತ್ತೂರು: ಹಿಂದು ಜಾಗರಣ ವೇದಿಕೆಯ ಕಾರ್ಯದರ್ಶಿಯಾಗಿದ್ದ ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಆರ್ಯಾಪು ನಿವಾಸಿ ಚರಣ್ ರೈ ಅವರನ್ನು ದುಷ್ಕರ್ಮಿಗಳು ಪೆರ್ಲಂಪಾಡಿ ರಸ್ತೆ ಬದಿಯಲ್ಲಿ ಕೊಲೆ ಮಾಡಿದ್ದಾರೆ.
ಚರಣ್ ರೈ ಅವರಿಗೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಸಂಪ್ಯದಲ್ಲಿ ಗಣೇಶೋತ್ಸವದ ವೇಳೆ ಯಕ್ಷಗಾನ ವೀಕ್ಷಿಸುತ್ತಿದ್ದಾಗ ಕಾರ್ತಿಕ್ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು.
ಈ ಕೊಲೆ ಪ್ರಕರಣದಲ್ಲಿ ಸಂಪ್ಯದ ಚರಣ್ ರೈ, ಕಿರಣ್ ರೈ, ಮಂಗಳೂರಿನ ಪ್ರೀತಂ ಶೆಟ್ಟಿ ಮತ್ತು ಅವರಿಗೆ ಆಶ್ರಯ ನೀಡಿದ್ದ ಮಂಗಳೂರಿನ ಮೊಂತೆರೋ ಅರೆಸ್ಟ್ ಆಗಿದ್ದರು.
ನ್ಯಾಯಾಲಯದ ವಿಚಾರಣೆಯಲ್ಲಿ ಚರಣ್ ರೈ, ಕಿರಣ್ ರೈ, ಮೊಂತೆರೋ ಜಾಮೀನು ಪಡೆದು ಹೊರ ಬಂದಿದ್ದರು. ಚರಣ್ ರೈ ಅವರು ಪೆರ್ಲಂಪಾಡಿಯಲ್ಲಿ ನೂತನ ಮೆಡಿಕಲ್ ಶಾಪ್ ಆರಂಭಿಸುವ ಕುರಿತು ಪೆರ್ಲಂಪಾಡಿಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಅವರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…