ಮೈಸೂರು : ಜನತೆಯ ಮೇಲೆ ಬಲವಂತವಾಗಿ ಹಿಂದಿಯನ್ನು ಹೇರಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿ ರಾಷ್ಟ್ರ ಭಾಷೆಯೂ ಅಲ್ಲ, ಸಾರ್ವಭೌಮ ಭಾಷೆಯೂ ಅಲ್ಲ. ಅದನ್ನು ಬಲವಂತವಾಗಿ ಜನತೆಯ ಮೇಲೆ ಹೇರಬಾರದು ಎಂದು ಹೇಳಿದ್ದಾರೆ.
ಇನ್ನು ನೆರೆ ಸಂತ್ರಸ್ತರಿಗೆ 4-5 ದಿನದಲ್ಲಿ ಸಿಹಿಸುದ್ದಿ ಸಿಗಲಿದೆ. ಕೇಂದ್ರ ಸರ್ಕಾರ ಪರಿಹಾರ ನೀಡಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದು, ಇದರಲ್ಲಿ ಸಿಹಿ ಏನಿದೆ. ಘಟನೆ ನಡೆದು 45 ದಿನಗಳಿಂದ ಪರಿಹಾರ ನೀಡಿರಲಿಲ್ಲವಲ್ಲ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದರು.
ಹಿಂದಿ ಸೇರಿ ಯಾವುದೇ ಭಾಷೆ ಕಲಿಯುವುದರಲ್ಲಿ ತಪ್ಪಿಲ್ಲ, ನಮ್ಮ ವಿರೋಧವೂ ಇಲ್ಲ. ಆದರೆ, ಬಲವಂತವಾಗಿ ಹೇರಿಕೆ ಮಾಡುವುದು ಸರಿಯಲ್ಲ ಎಂದು ಹಿಂದಿ ಭಾಷೆ ಪರವಾಗಿ ಮಾತನಾಡಿದ್ದ ಬಿಜೆಪಿ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಅಲ್ಲದೆ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಕ್ಕಳಿಗೆ ಹಿಂದಿ ಕಲಿಸಿ ಎಂದು ಶಿಕಷ್ಕರಿಗೆ ಹೇಳಿದ್ದಾರೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ, ಮಕ್ಕಳಿಗೂ ಸಹ ಬಲವಂತವಾಗಿ ಹಿಂದಿ ಹೇರಿಕೆ ಮಾಡುವುದು ತಪ್ಪು. ಇಷ್ಟವಿದ್ದವರು ಕಲಿಯಬಹುದು ಎಂದು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…