ಮೈಸೂರು : ಜನತೆಯ ಮೇಲೆ ಬಲವಂತವಾಗಿ ಹಿಂದಿಯನ್ನು ಹೇರಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿ ರಾಷ್ಟ್ರ ಭಾಷೆಯೂ ಅಲ್ಲ, ಸಾರ್ವಭೌಮ ಭಾಷೆಯೂ ಅಲ್ಲ. ಅದನ್ನು ಬಲವಂತವಾಗಿ ಜನತೆಯ ಮೇಲೆ ಹೇರಬಾರದು ಎಂದು ಹೇಳಿದ್ದಾರೆ.
ಇನ್ನು ನೆರೆ ಸಂತ್ರಸ್ತರಿಗೆ 4-5 ದಿನದಲ್ಲಿ ಸಿಹಿಸುದ್ದಿ ಸಿಗಲಿದೆ. ಕೇಂದ್ರ ಸರ್ಕಾರ ಪರಿಹಾರ ನೀಡಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದು, ಇದರಲ್ಲಿ ಸಿಹಿ ಏನಿದೆ. ಘಟನೆ ನಡೆದು 45 ದಿನಗಳಿಂದ ಪರಿಹಾರ ನೀಡಿರಲಿಲ್ಲವಲ್ಲ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದರು.
ಹಿಂದಿ ಸೇರಿ ಯಾವುದೇ ಭಾಷೆ ಕಲಿಯುವುದರಲ್ಲಿ ತಪ್ಪಿಲ್ಲ, ನಮ್ಮ ವಿರೋಧವೂ ಇಲ್ಲ. ಆದರೆ, ಬಲವಂತವಾಗಿ ಹೇರಿಕೆ ಮಾಡುವುದು ಸರಿಯಲ್ಲ ಎಂದು ಹಿಂದಿ ಭಾಷೆ ಪರವಾಗಿ ಮಾತನಾಡಿದ್ದ ಬಿಜೆಪಿ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಅಲ್ಲದೆ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಕ್ಕಳಿಗೆ ಹಿಂದಿ ಕಲಿಸಿ ಎಂದು ಶಿಕಷ್ಕರಿಗೆ ಹೇಳಿದ್ದಾರೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ, ಮಕ್ಕಳಿಗೂ ಸಹ ಬಲವಂತವಾಗಿ ಹಿಂದಿ ಹೇರಿಕೆ ಮಾಡುವುದು ತಪ್ಪು. ಇಷ್ಟವಿದ್ದವರು ಕಲಿಯಬಹುದು ಎಂದು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…