ಮೈಸೂರು : ಜನತೆಯ ಮೇಲೆ ಬಲವಂತವಾಗಿ ಹಿಂದಿಯನ್ನು ಹೇರಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿ ರಾಷ್ಟ್ರ ಭಾಷೆಯೂ ಅಲ್ಲ, ಸಾರ್ವಭೌಮ ಭಾಷೆಯೂ ಅಲ್ಲ. ಅದನ್ನು ಬಲವಂತವಾಗಿ ಜನತೆಯ ಮೇಲೆ ಹೇರಬಾರದು ಎಂದು ಹೇಳಿದ್ದಾರೆ.
ಇನ್ನು ನೆರೆ ಸಂತ್ರಸ್ತರಿಗೆ 4-5 ದಿನದಲ್ಲಿ ಸಿಹಿಸುದ್ದಿ ಸಿಗಲಿದೆ. ಕೇಂದ್ರ ಸರ್ಕಾರ ಪರಿಹಾರ ನೀಡಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದು, ಇದರಲ್ಲಿ ಸಿಹಿ ಏನಿದೆ. ಘಟನೆ ನಡೆದು 45 ದಿನಗಳಿಂದ ಪರಿಹಾರ ನೀಡಿರಲಿಲ್ಲವಲ್ಲ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದರು.
ಹಿಂದಿ ಸೇರಿ ಯಾವುದೇ ಭಾಷೆ ಕಲಿಯುವುದರಲ್ಲಿ ತಪ್ಪಿಲ್ಲ, ನಮ್ಮ ವಿರೋಧವೂ ಇಲ್ಲ. ಆದರೆ, ಬಲವಂತವಾಗಿ ಹೇರಿಕೆ ಮಾಡುವುದು ಸರಿಯಲ್ಲ ಎಂದು ಹಿಂದಿ ಭಾಷೆ ಪರವಾಗಿ ಮಾತನಾಡಿದ್ದ ಬಿಜೆಪಿ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಅಲ್ಲದೆ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಕ್ಕಳಿಗೆ ಹಿಂದಿ ಕಲಿಸಿ ಎಂದು ಶಿಕಷ್ಕರಿಗೆ ಹೇಳಿದ್ದಾರೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ, ಮಕ್ಕಳಿಗೂ ಸಹ ಬಲವಂತವಾಗಿ ಹಿಂದಿ ಹೇರಿಕೆ ಮಾಡುವುದು ತಪ್ಪು. ಇಷ್ಟವಿದ್ದವರು ಕಲಿಯಬಹುದು ಎಂದು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…