ತುಮಕೂರು: ನಮ್ಮ ದೇಶದಲ್ಲಿ ಹಿಂದುಗಳು ಗಣೇಶೋತ್ಸವ ಆಚರಿಸಲು ಅನುಮತಿಗಾಗಿ ನಾಯಿಗಳಂತೆ ಅಲೆದಾಡಬೇಕಿದೆ ಎಂದು ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಗುರುವಾರ ಹೇಳಿದ್ದಾರೆ.
ನಗರದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇನ್ಮುಂದೆ ಇದೆಲ್ಲಾ ಮುಂದುವರಿಯಬಾರದು. ಎಲ್ಲಾ ಇಲಾಖೆಯ ಅನುಮತಿ ಒಂದೇ ಕಡೆ ಸಿಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಹಬ್ಬಕ್ಕೆ ಬೇಕಾಗುವ ಎಲ್ಲಾ ಪರವಾನಗಿಗಳು ಒಂದೇ ಕಡೆ ಸಿಗುವಂತೆ ಮಾಡಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ದ ಮುಖ್ಯಮಂತ್ರಿಗಳಿಗೆ ಹೇಳಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಅಧಿಕಾರಿಗಳಿಗೆ ತುಮಕೂರು ನಗರ ಶಾಸಕ ಜ್ಯೋತಿಗಣೇಶ್ ಖಡಕ್ ವಾರ್ನಿಂಗ್ ಕೊಟ್ಟರು.
ಅನುಮತಿ ನೆಪದಲ್ಲಿ ಯಾವುದೇ ಗಣೇಶೋತ್ಸವ ಸಮಿತಿಯವರನ್ನು ಅಲೆದಾಡಿಸಿದರೆ ಶಿಸ್ತು ಕ್ರಮಕ್ಕೆ ಸರಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಶಾಸಕ ಜ್ಯೋತಿ ಗಣೇಶ್ ಇದೇ ವೇಳೆ ಎಚ್ಚರಿಕೆ ನೀಡಿದರು.
ಈಗ ಇರೋದು ಬೇರೆ ಯಾವುದೋ ಸರ್ಕಾರ ಇಲ್ಲ, ಬಿಜೆಪಿ ಸರ್ಕಾರ ಇರೋದು. ಅಧಿಕಾರಿಗಳು ಇದನ್ನು ಕುರಿತು ಕೆಲಸ ಮಾಡಬೇಕು ಎಂದು ಶಾಸಕ ಜ್ಯೋತಿಗಣೇಶ್ ಹೇಳಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…