ತುಮಕೂರು: ನಮ್ಮ ದೇಶದಲ್ಲಿ ಹಿಂದುಗಳು ಗಣೇಶೋತ್ಸವ ಆಚರಿಸಲು ಅನುಮತಿಗಾಗಿ ನಾಯಿಗಳಂತೆ ಅಲೆದಾಡಬೇಕಿದೆ ಎಂದು ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಗುರುವಾರ ಹೇಳಿದ್ದಾರೆ.
ನಗರದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇನ್ಮುಂದೆ ಇದೆಲ್ಲಾ ಮುಂದುವರಿಯಬಾರದು. ಎಲ್ಲಾ ಇಲಾಖೆಯ ಅನುಮತಿ ಒಂದೇ ಕಡೆ ಸಿಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಹಬ್ಬಕ್ಕೆ ಬೇಕಾಗುವ ಎಲ್ಲಾ ಪರವಾನಗಿಗಳು ಒಂದೇ ಕಡೆ ಸಿಗುವಂತೆ ಮಾಡಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ದ ಮುಖ್ಯಮಂತ್ರಿಗಳಿಗೆ ಹೇಳಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಅಧಿಕಾರಿಗಳಿಗೆ ತುಮಕೂರು ನಗರ ಶಾಸಕ ಜ್ಯೋತಿಗಣೇಶ್ ಖಡಕ್ ವಾರ್ನಿಂಗ್ ಕೊಟ್ಟರು.
ಅನುಮತಿ ನೆಪದಲ್ಲಿ ಯಾವುದೇ ಗಣೇಶೋತ್ಸವ ಸಮಿತಿಯವರನ್ನು ಅಲೆದಾಡಿಸಿದರೆ ಶಿಸ್ತು ಕ್ರಮಕ್ಕೆ ಸರಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಶಾಸಕ ಜ್ಯೋತಿ ಗಣೇಶ್ ಇದೇ ವೇಳೆ ಎಚ್ಚರಿಕೆ ನೀಡಿದರು.
ಈಗ ಇರೋದು ಬೇರೆ ಯಾವುದೋ ಸರ್ಕಾರ ಇಲ್ಲ, ಬಿಜೆಪಿ ಸರ್ಕಾರ ಇರೋದು. ಅಧಿಕಾರಿಗಳು ಇದನ್ನು ಕುರಿತು ಕೆಲಸ ಮಾಡಬೇಕು ಎಂದು ಶಾಸಕ ಜ್ಯೋತಿಗಣೇಶ್ ಹೇಳಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…