ಕೇರಳ : ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಬಳಸಿಕೊಂಡು ಶಬರಿಮಲೆ ದೇವಾಲಯಕ್ಕೆ ಪ್ರವೇಶಿಸಲು ಯತ್ನಿಸಿದ್ದ ಕಿಸ್ ಆಫ್ ಲವ್ ಆಯೋಜಕಿ ಮತ್ತು ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾರನ್ನು ಕೇರಳ ಮುಸ್ಲಿಂ ಜಮಾತ್ ಪರಿಷತ್ ಮುಸ್ಲಿಂ ಸಮುದಾಯದಿಂದ ಉಚ್ಚಾಟನೆ ಮಾಡಿದೆ.
ಈ ಕುರಿತಂತೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ರೆಹಾನ್ ಫಾತಿಮಾ ಅವರ ನಡೆಯಿಂದಾಗಿ ಲಕ್ಷಾಂತರ ಹಿಂದುಗಳು ಹಾಗೂ ಅವರ ಧಾರ್ಮಿಕ ನಂಬಿಕೆಗಳಿಗೆ ನೋವುಂಟು ಮಾಡಿದೆ. ಆಕೆಯ ನಡವಳಿಕೆ ಹಿಂದೂ ಸಮುದಾಯದ ಆಚರಣೆಗಳಿಗೆ ವಿರುದ್ಧವಾಗಿದೆ ಎಂದು ಪತ್ರಿಕಾ ಹೇಳಿಕೆಯನ್ನು ಕೇರಳ ಮುಸ್ಲಿಮ್ ಜಮಾತ್ ಕೌನ್ಸಿಲ್ ಬಿಡುಗಡೆ ಮಾಡಿದೆ. ಹಾಗಾಗಿ ಆಕೆಗೆ ಮುಸ್ಲಿಂ ಹೆಸರನ್ನು ಬಳಕೆ ಮಾಡಿಕೊಳ್ಳಲು ಯಾವ ಹಕ್ಕು ಇಲ್ಲ ಎಂದಿರುವ ಅವರು ಕೋಮು, ಧಾರ್ಮಿಕ ದ್ವೇಷ ಬಿತ್ತುತ್ತಿರುವ ರೆಹಾನಾ ವಿರುದ್ಧ ಸರ್ಕಾರ ಐಪಿಸಿ ಸೆಕ್ಷನ್ 153A ಅಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ರೆಹಾನಾ ಫಾತಿಮಾ ಅವರನ್ನು ಎರ್ನಾಕುಲಂ ಕೇಂದ್ರ ಮುಸ್ಲಿಂ ಜಮಾತ್ನಿಂದ ಉಚ್ಚಾಟನೆ ಮಾಡಲಾಗಿದ್ದು, ಅವರ ಕುಟುಂಬ ಸದಸ್ಯರನ್ನು ಕೂಡ ಮಹಲ್ಲಾದ ಸದಸ್ಯತ್ವದಿಂದ ಹೊರಹಾಕಲಾಗಿದೆ ಎಂದು ಪರಿಷತ್ ಅಧ್ಯಕ್ಷ ಎ. ಪೂಕುಂಜು ತಿಳಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…