ಕೇರಳ : ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಬಳಸಿಕೊಂಡು ಶಬರಿಮಲೆ ದೇವಾಲಯಕ್ಕೆ ಪ್ರವೇಶಿಸಲು ಯತ್ನಿಸಿದ್ದ ಕಿಸ್ ಆಫ್ ಲವ್ ಆಯೋಜಕಿ ಮತ್ತು ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾರನ್ನು ಕೇರಳ ಮುಸ್ಲಿಂ ಜಮಾತ್ ಪರಿಷತ್ ಮುಸ್ಲಿಂ ಸಮುದಾಯದಿಂದ ಉಚ್ಚಾಟನೆ ಮಾಡಿದೆ.
ಈ ಕುರಿತಂತೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ರೆಹಾನ್ ಫಾತಿಮಾ ಅವರ ನಡೆಯಿಂದಾಗಿ ಲಕ್ಷಾಂತರ ಹಿಂದುಗಳು ಹಾಗೂ ಅವರ ಧಾರ್ಮಿಕ ನಂಬಿಕೆಗಳಿಗೆ ನೋವುಂಟು ಮಾಡಿದೆ. ಆಕೆಯ ನಡವಳಿಕೆ ಹಿಂದೂ ಸಮುದಾಯದ ಆಚರಣೆಗಳಿಗೆ ವಿರುದ್ಧವಾಗಿದೆ ಎಂದು ಪತ್ರಿಕಾ ಹೇಳಿಕೆಯನ್ನು ಕೇರಳ ಮುಸ್ಲಿಮ್ ಜಮಾತ್ ಕೌನ್ಸಿಲ್ ಬಿಡುಗಡೆ ಮಾಡಿದೆ. ಹಾಗಾಗಿ ಆಕೆಗೆ ಮುಸ್ಲಿಂ ಹೆಸರನ್ನು ಬಳಕೆ ಮಾಡಿಕೊಳ್ಳಲು ಯಾವ ಹಕ್ಕು ಇಲ್ಲ ಎಂದಿರುವ ಅವರು ಕೋಮು, ಧಾರ್ಮಿಕ ದ್ವೇಷ ಬಿತ್ತುತ್ತಿರುವ ರೆಹಾನಾ ವಿರುದ್ಧ ಸರ್ಕಾರ ಐಪಿಸಿ ಸೆಕ್ಷನ್ 153A ಅಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ರೆಹಾನಾ ಫಾತಿಮಾ ಅವರನ್ನು ಎರ್ನಾಕುಲಂ ಕೇಂದ್ರ ಮುಸ್ಲಿಂ ಜಮಾತ್ನಿಂದ ಉಚ್ಚಾಟನೆ ಮಾಡಲಾಗಿದ್ದು, ಅವರ ಕುಟುಂಬ ಸದಸ್ಯರನ್ನು ಕೂಡ ಮಹಲ್ಲಾದ ಸದಸ್ಯತ್ವದಿಂದ ಹೊರಹಾಕಲಾಗಿದೆ ಎಂದು ಪರಿಷತ್ ಅಧ್ಯಕ್ಷ ಎ. ಪೂಕುಂಜು ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…