ಕೇರಳ : ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಬಳಸಿಕೊಂಡು ಶಬರಿಮಲೆ ದೇವಾಲಯಕ್ಕೆ ಪ್ರವೇಶಿಸಲು ಯತ್ನಿಸಿದ್ದ ಕಿಸ್ ಆಫ್ ಲವ್ ಆಯೋಜಕಿ ಮತ್ತು ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾರನ್ನು ಕೇರಳ ಮುಸ್ಲಿಂ ಜಮಾತ್ ಪರಿಷತ್ ಮುಸ್ಲಿಂ ಸಮುದಾಯದಿಂದ ಉಚ್ಚಾಟನೆ ಮಾಡಿದೆ.
ಈ ಕುರಿತಂತೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ರೆಹಾನ್ ಫಾತಿಮಾ ಅವರ ನಡೆಯಿಂದಾಗಿ ಲಕ್ಷಾಂತರ ಹಿಂದುಗಳು ಹಾಗೂ ಅವರ ಧಾರ್ಮಿಕ ನಂಬಿಕೆಗಳಿಗೆ ನೋವುಂಟು ಮಾಡಿದೆ. ಆಕೆಯ ನಡವಳಿಕೆ ಹಿಂದೂ ಸಮುದಾಯದ ಆಚರಣೆಗಳಿಗೆ ವಿರುದ್ಧವಾಗಿದೆ ಎಂದು ಪತ್ರಿಕಾ ಹೇಳಿಕೆಯನ್ನು ಕೇರಳ ಮುಸ್ಲಿಮ್ ಜಮಾತ್ ಕೌನ್ಸಿಲ್ ಬಿಡುಗಡೆ ಮಾಡಿದೆ. ಹಾಗಾಗಿ ಆಕೆಗೆ ಮುಸ್ಲಿಂ ಹೆಸರನ್ನು ಬಳಕೆ ಮಾಡಿಕೊಳ್ಳಲು ಯಾವ ಹಕ್ಕು ಇಲ್ಲ ಎಂದಿರುವ ಅವರು ಕೋಮು, ಧಾರ್ಮಿಕ ದ್ವೇಷ ಬಿತ್ತುತ್ತಿರುವ ರೆಹಾನಾ ವಿರುದ್ಧ ಸರ್ಕಾರ ಐಪಿಸಿ ಸೆಕ್ಷನ್ 153A ಅಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ರೆಹಾನಾ ಫಾತಿಮಾ ಅವರನ್ನು ಎರ್ನಾಕುಲಂ ಕೇಂದ್ರ ಮುಸ್ಲಿಂ ಜಮಾತ್ನಿಂದ ಉಚ್ಚಾಟನೆ ಮಾಡಲಾಗಿದ್ದು, ಅವರ ಕುಟುಂಬ ಸದಸ್ಯರನ್ನು ಕೂಡ ಮಹಲ್ಲಾದ ಸದಸ್ಯತ್ವದಿಂದ ಹೊರಹಾಕಲಾಗಿದೆ ಎಂದು ಪರಿಷತ್ ಅಧ್ಯಕ್ಷ ಎ. ಪೂಕುಂಜು ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…