ಹಿಂದುಗಳ ಬಗ್ಗೆ ಅಸಂಬದ್ಧ ಮಾತನಾಡಿ ಕಾಂಗ್ರೆಸ್ ಶವಪೆಟ್ಟಿಗೆಗೆ ಅಂತಿಮ ಮೊಳೆ ಹೊಡೆಯುತ್ತಿದೆ: ಶ್ರೀಶ ನಾಯಕ್ vishwanews24
ಉಡುಪಿ: ಉಡುಪಿಯ ಸರ್ಕಾರಿ ಬಾಲಕಿಯರ ಕಾಲೇಜಿನ 6 ಮಂದಿ ಮುಸ್ಲೀಂ ವಿದ್ಯಾರ್ಥಿನಿಯರ ಮೂಲಕ ಹುಟ್ಟು ಹಾಕಲಾದ ಹಿಜಾಬ್ ವಿವಾದವನ್ನು ಈಗ ಸಂಘ ಪರಿವಾರ ಮತ್ತು ಎಬಿವಿಪಿ ತಲೆಗೆ ಕಟ್ಟುತ್ತಿರುವ ಕ್ಯಾಂಪಸ್ ಫ್ರಂಟ್ ಮತ್ತು ಇತರ ಮುಸ್ಲೀಂ ಸಂಘಟನೆಗಳ ಆರೋಪ ಖಂಡನೀಯ. ಈ ವಿವಾದ ವಿಷಯದಲ್ಲಿ ಹಿಂದುಗಳು ಸಂಘಟಿತರಾಗಿದ್ದು ಮುಂದಿನ ದಿನಗಳಲ್ಲಿ ಈ ವಿವಾದವು ಹಿಜಾಬ್ ನ್ನು ಬೆಂಬಲಿಸುತ್ತಿರುವ ಸಂಘಟನೆಗಳಿಗೆ ದುಬಾರಿಯಾಗಲಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ಎಚ್ಚರಿಕೆ ನೀಡಿದ್ದಾರೆ.
ತಮ್ಮ ಹಾಸ್ಯಾಸ್ಪದ ನಡವಳಿಕೆ, ಹೇಳಿಕೆಗಳಿಂದ ಹೇಗಾದರೂ ಮಾಡಿ ಕಾಂಗ್ರೆಸ್ ಪಕ್ಷವನ್ನು ಸರ್ವನಾಶ ಮಾಡಲು ಹೊರಟಿರುವ ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಅವರು ಹಿಜಾಬ್ ವಿಷಯದಲ್ಲಿ ಹಿಂದುಗಳ ವಿರುದ್ಧ ಮತ್ತೊಮ್ಮೆ ಅಸಂಬದ್ಧವಾಗಿ ಮಾತನಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಶವಪೆಟ್ಟಿಗೆಗೆ ಅಂತಿಮ ಮೊಳೆ ಹೊಡೆಯುತಿದ್ದಾರೆ ಎಂದವರು ಟೀಕಿಸಿದ್ದಾರೆ.
ಉಡುಪಿ ಬಾಲಕಿಯರ ಸರ್ಕಾರಿ ಕಾಲೇಜಿನ 6 ಮಂದಿ ಮುಸ್ಲೀಂ ವಿದ್ಯಾರ್ಥಿನಿಯರ ಹಠ ಮತ್ತು ಮಾತುಗಳನ್ನು ಗಮನಿಸಿದರೇ, ಈ ವಿವಾದ ಅವರ ಸ್ವಯಂಯಿಚ್ಛೆಯಿಂದ ನಡೆಯುತ್ತಿರುವುಲ್ಲ, ಅದರ ಹಿಂದೆ ಸಾಕಷ್ಟು ತಯಾರಿ ತರಬೇತಿ ನಡೆದಿರುವುದು ಸಾರ್ವಜನಿಕರಿಗೆ ಮನವರಿಕೆಯಾಗಿದೆ. ಈ ವಿದ್ಯಾರ್ಥಿಗಳು ಈಗ ಉಡುಪಿ ಶಾಸಕರಾದ ರಘಪತಿ ಭಟ್ ಅವರನ್ನು ದೂಷಿಸುತ್ತಿರುವುದು ಕೂಡ ಅವರಿಗೆ ನೀಡವಾಗಿರುವ ತರಬೇತಿಯ ಭಾಗವಾಗಿದೆ. ಈ ಷಡ್ಯಂತ್ರವನ್ನು ಪೊಲೀಸರು ಬಯಲಿಗೆಳೆಯಬೇಕು ಮತ್ತು ರಾಜ್ಯದಲ್ಲಿ ಸಮಾನ ಶಿಕ್ಷಣ ಮತ್ತು ಶಿಕ್ಷಣದಲ್ಲಿ ಸಮಾನ ಸಮವಸ್ತ್ರಸಂಹಿತೆ ಜಾರಿಗೊಳಿಸಬೇಕು ಎಂದು ಶ್ರೀಶ ನಾಯಕ್ ಆಗ್ರಹಿಸಿದ್ದಾರೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…