ಹಿಂದುಗಳ ಬಗ್ಗೆ ಅಸಂಬದ್ಧ ಮಾತನಾಡಿ ಕಾಂಗ್ರೆಸ್ ಶವಪೆಟ್ಟಿಗೆಗೆ ಅಂತಿಮ ಮೊಳೆ ಹೊಡೆಯುತ್ತಿದೆ: ಶ್ರೀಶ ನಾಯಕ್ vishwanews24
ಉಡುಪಿ: ಉಡುಪಿಯ ಸರ್ಕಾರಿ ಬಾಲಕಿಯರ ಕಾಲೇಜಿನ 6 ಮಂದಿ ಮುಸ್ಲೀಂ ವಿದ್ಯಾರ್ಥಿನಿಯರ ಮೂಲಕ ಹುಟ್ಟು ಹಾಕಲಾದ ಹಿಜಾಬ್ ವಿವಾದವನ್ನು ಈಗ ಸಂಘ ಪರಿವಾರ ಮತ್ತು ಎಬಿವಿಪಿ ತಲೆಗೆ ಕಟ್ಟುತ್ತಿರುವ ಕ್ಯಾಂಪಸ್ ಫ್ರಂಟ್ ಮತ್ತು ಇತರ ಮುಸ್ಲೀಂ ಸಂಘಟನೆಗಳ ಆರೋಪ ಖಂಡನೀಯ. ಈ ವಿವಾದ ವಿಷಯದಲ್ಲಿ ಹಿಂದುಗಳು ಸಂಘಟಿತರಾಗಿದ್ದು ಮುಂದಿನ ದಿನಗಳಲ್ಲಿ ಈ ವಿವಾದವು ಹಿಜಾಬ್ ನ್ನು ಬೆಂಬಲಿಸುತ್ತಿರುವ ಸಂಘಟನೆಗಳಿಗೆ ದುಬಾರಿಯಾಗಲಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ಎಚ್ಚರಿಕೆ ನೀಡಿದ್ದಾರೆ.
ತಮ್ಮ ಹಾಸ್ಯಾಸ್ಪದ ನಡವಳಿಕೆ, ಹೇಳಿಕೆಗಳಿಂದ ಹೇಗಾದರೂ ಮಾಡಿ ಕಾಂಗ್ರೆಸ್ ಪಕ್ಷವನ್ನು ಸರ್ವನಾಶ ಮಾಡಲು ಹೊರಟಿರುವ ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಅವರು ಹಿಜಾಬ್ ವಿಷಯದಲ್ಲಿ ಹಿಂದುಗಳ ವಿರುದ್ಧ ಮತ್ತೊಮ್ಮೆ ಅಸಂಬದ್ಧವಾಗಿ ಮಾತನಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಶವಪೆಟ್ಟಿಗೆಗೆ ಅಂತಿಮ ಮೊಳೆ ಹೊಡೆಯುತಿದ್ದಾರೆ ಎಂದವರು ಟೀಕಿಸಿದ್ದಾರೆ.
ಉಡುಪಿ ಬಾಲಕಿಯರ ಸರ್ಕಾರಿ ಕಾಲೇಜಿನ 6 ಮಂದಿ ಮುಸ್ಲೀಂ ವಿದ್ಯಾರ್ಥಿನಿಯರ ಹಠ ಮತ್ತು ಮಾತುಗಳನ್ನು ಗಮನಿಸಿದರೇ, ಈ ವಿವಾದ ಅವರ ಸ್ವಯಂಯಿಚ್ಛೆಯಿಂದ ನಡೆಯುತ್ತಿರುವುಲ್ಲ, ಅದರ ಹಿಂದೆ ಸಾಕಷ್ಟು ತಯಾರಿ ತರಬೇತಿ ನಡೆದಿರುವುದು ಸಾರ್ವಜನಿಕರಿಗೆ ಮನವರಿಕೆಯಾಗಿದೆ. ಈ ವಿದ್ಯಾರ್ಥಿಗಳು ಈಗ ಉಡುಪಿ ಶಾಸಕರಾದ ರಘಪತಿ ಭಟ್ ಅವರನ್ನು ದೂಷಿಸುತ್ತಿರುವುದು ಕೂಡ ಅವರಿಗೆ ನೀಡವಾಗಿರುವ ತರಬೇತಿಯ ಭಾಗವಾಗಿದೆ. ಈ ಷಡ್ಯಂತ್ರವನ್ನು ಪೊಲೀಸರು ಬಯಲಿಗೆಳೆಯಬೇಕು ಮತ್ತು ರಾಜ್ಯದಲ್ಲಿ ಸಮಾನ ಶಿಕ್ಷಣ ಮತ್ತು ಶಿಕ್ಷಣದಲ್ಲಿ ಸಮಾನ ಸಮವಸ್ತ್ರಸಂಹಿತೆ ಜಾರಿಗೊಳಿಸಬೇಕು ಎಂದು ಶ್ರೀಶ ನಾಯಕ್ ಆಗ್ರಹಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…