ಪುರ್ಬಾ ಮೇದಿನಿಪುರ್: ಬಿಜೆಪಿ ಯು ಹಿಂದೂಗಳ ಹೆಸರಿನಲ್ಲಿ ಸುಳ್ಳು ಹೇಳುತ್ತಿರುವ ಪಕ್ಷ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುಡುಗಿದರು.
ಜಿಲ್ಲೆಯಲ್ಲಿ ಬುಧವಾರ ನಡೆದ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬಿಜೆಪಿಗೆ ಇತಿಹಾಸ ತಿರುಚ ಬಲ್ಲರು ಹೆಸರುಗಳನ್ನು ಬದಲಿಸಬಹುದು ಆದರೆ ಗೇಮ್ ಚೇಂಜರ್ ಆಗಲು ಸಾಧ್ಯವಿಲ್ಲ. ದೇಶದ ಪರಿಸ್ಥಿತಿ ಆಪತ್ತಿನಲ್ಲಿ ಇದೆ. ಅಸ್ಸಾಂನಲ್ಲಿ 40 ಲಕ್ಷ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ ಅದರಲ್ಲಿದ್ದ 23 ಲಕ್ಷ ಹಿಂದುಗಳು ಬೆಂಗಾಳಿಗಳು. ಹಿಂದುಗಳ ಹೆಸರಲ್ಲಿ ಸುಳ್ಳು ಹೇಳುತ್ತಿರುವವರು ಇದನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಗುಡುಗಿದರು.
ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಅಂತಿಮ ಪಟ್ಟಿಯ ವಿರುದ್ಧ ನವೆಂಬರ್ 16ರಂದು ಮಾತನಾಡಿದ್ದ ಅವರು, ಎನ್ಆರ್ಸಿ ವಿರುದ್ಧ ಚಳುವಳಿ ಮುಂದುವರಿಸುವಂತೆ ಅಸ್ಸಾಂ ಜನರಿಗೆ ಕರೆ ನೀಡಿದ್ದರು. ಜೊತೆಗೆ ಟಿಎಂಸಿ ಬೆಂಬಲ ನೀಡುವುದಾಗಿ ಹೇಳಿದ್ದರು.
ಎನ್ ಆರ್ ಸಿ ಪಟ್ಟಿಯಿಂದ ನಿಜವಾದ ನಾಗರಿಕರ ಹೆಸರುಗಳನ್ನು ಕೈ ಬಿಡಲಾಗಿದೆ ಅಸ್ಸಾಂ ಬಿಹಾರ ಹಾಗೂ ಬಂಗಾಳಿ ಗಳನ್ನು ಬಲವಂತವಾಗಿ ಪಟ್ಟಿಯಿಂದ ಹೊರ ಹಾಕಲಾಗಿದೆ.. ಪಟ್ಟಿಯಲ್ಲಿ ನಿಮ್ಮ ತಾಯಿಯ ಹೆಸರು ಇದೆ ಆದರೆ ತಂದೆಯ ಹೆಸರು ಇಲ್ಲ ಎಂಬುದನ್ನು ಸುಮ್ಮನೆ ಕಲ್ಪಿಸಿಕೊಳ್ಳಿ ನಿಮ್ಮ ಮಗನ ಹೆಸರನ್ನು ಉಲ್ಲೇಖಿಸಲಾಗಿದೆ ಆದರೆ ಮಗಳ ಹೆಸರನ್ನು ಕೈಬಿಡಲಾಗಿದೆ ಎಂಬುದನ್ನು ಊಹಿಸಿ ಪಟ್ಟಿಯ ನಿಜ ಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ ಎಂದು ಹೇಳಿದ್ದರು.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಎಲ್ಲ ವಿರೋಧ ಪಕ್ಷಗಳು ಒಂದಾಗಬೇಕು ಎಂದು ಕರೆ ನೀಡಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…