ಉಡುಪಿ: ನಾವು ಬಿಜೆಪಿಗಿಂತ ಒಳ್ಳೆಯ ಹಿಂದುತ್ವ ಪಾಲಿಸುತ್ತೇವೆ. ಹಿಂದುತ್ವದಲ್ಲಿ ಬಿಜೆಪಿಗಿಂತ ಒಂದು ಹೆಜ್ಜೆ ಮುಂದೆ ನಾವಿದ್ದೇವೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಜಿಲ್ಲೆಯ ಬೈಂದೂರು ತಾಲೂಕು ತ್ರಾಸಿಯಲ್ಲಿ ಉಪಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿಲ್ಲ. ಸರ್ಕಾರದ ಯೋಜನೆಗಳಿಗೆ ಬೇಕಾಗುವಷ್ಟು ಹಣ ನಮ್ಮಲ್ಲಿದೆ. ಕರಾವಳಿ ಜನ ಹಿಂದುತ್ವಕ್ಕೆ ಬಲಿಯಾಗುತ್ತಿದ್ದಾರೆ. ಹಿಂದೂ- ಮುಸಲ್ಮಾನರು ಸಂಘರ್ಷಕ್ಕೆ ಒಳಗಾಗಬೇಡಿ. ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಡುತ್ತ ಬಿಜೆಪಿಯವರು ಚುನಾವಣೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ನಾನು ದೈವಪ್ರೇರಿತ ಮುಖ್ಯಮಂತ್ರಿ. ಬಿಜೆಪಿ ನಾಯಕರು ಸರ್ಕಾರ ಬೀಳುವ ಕನಸಲ್ಲಿದ್ದಾರೆ. ನಮಗೆ ದೈವ ಪ್ರೇರಣೆ ಇದೆ. ನಾನು ಎಷ್ಟು ದಿನ ಅಧಿಕಾರದಲ್ಲಿ ಇರಬೇಕಂತ ದೇವರು ತೀರ್ಮಾನಿಸ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.
ಉಪಚುನಾವಣೆ ನಂತರ ನಾನು ಮನೆಗೆ ಹೋಗಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದಂತೆ ಯಾವುದೂ ಆಗಲ್ಲ. ಚುನಾವಣೆ ನಂತರ ಬಡವರ ಮನೆಗೆ ಬಂದು ಚರ್ಚೆ ಮಾಡುತ್ತೇನೆ. ಉಪ ಚುನಾವಣೆಯಲ್ಲಿ ಅಪ್ಪ-ಮಕ್ಕಳನ್ನು ಸೋಲಿಸಬೇಕು ಎಂದು ಜನರಲ್ಲಿ ಮನವಿ ಮಾಡಿಕೊಂಡರು.ಕರಾವಳಿ ಜನ ಹಿಂದುತ್ವಕ್ಕೆ ಬಲಿಯಾಗುತ್ತಿದ್ದಾರೆ. ಹಿಂದೂ- ಮುಸಲ್ಮಾನರು ಸಂಘರ್ಷಕ್ಕೆ ಒಳಗಾಗಬೇಡಿ. ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಡುತ್ತ ಬಿಜೆಪಿಯವರು ಚುನಾವಣೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…