ಶಿವಮೊಗ್ಗ: ಹನುಮ ಧ್ವಜ ಹಾಕುವ ವಿಚಾರದಲ್ಲಿ ಚರ್ಚೆಗಳು, ಎಳೆದಾಟಗಳು ನಡೆಯುತ್ತಿವೆ. ಬಂದ್ ಪರಿಸ್ಥಿತಿಗೆ ಹೋಗಬಾರದು. ಸರ್ಕಾರದಿಂದ ಹಿಂದೂಗಳ ಮನಸ್ಥಿತಿ ತುಳಿಯುವ ಕೆಲಸವಾಗುತ್ತಿದೆ. ತುಷ್ಟಿಕರಣ ರಾಜಕೀಯದಿಂದ ಅಲ್ಪಸಂಖ್ಯಾತರ ಮತ ಪಡೆಯಬಹುದೆಂದು ಕಾಂಗ್ರೆಸ್ ನವರು ಎಂದುಕೊಂಡಿದ್ದಾರೆ. ಕಾಂಗ್ರೆಸ್ ನವರು ತಮ್ಮ ತಪ್ಪನ್ನ ತಿದ್ದುಕೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳ ವಿರುದ್ಧ ನಡೆದುಕೊಳ್ಳುವುದನ್ನು ಕಾಂಗ್ರೆಸ್ ನವರು ಬಿಡಬೇಕು. ಹೀಗೆ ಮಾಡಿ ಪಾರ್ಲಿಮೆಂಟ್ ನಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನ ಕೂಡ ಇಲ್ಲವಾಗುತ್ತದೆ. ಹಿಂದೂಗಳ ಮನಸ್ಥಿತಿಗೆ ವಿರೋಧವಾಗಿ ನಡೆದುಕೊಳ್ಳುವ ಪ್ರಯತ್ನ ನಡೆಯಿತು. ಹಿಂದುತ್ವವನ್ನು ತುಳಿಯುವ ಕೆಲಸ ಆಗಬಾರದು, ಹಿಂದುತ್ವದ ಪರವಾದ ಶಕ್ತಿ ಖಂಡಿತ ಬುದ್ದಿ ಕಲಿಸುತ್ತದೆ. ಲೋಕಸಭಾ ಚುನಾವಣೆಯಲ್ಲಿ ಇದಕ್ಕೆ ಜನರೇ ಉತ್ತರ ನೀಡುತ್ತಾರೆ ಎಂದರು.
ಡಿ.ಕೆ.ಸುರೇಶ್ ಹೇಳಿಕೆಯಿಂದ ಆಶ್ಚರ್ಯವಾಗಿದೆ. ನಾಚಿಕೆಯಾಗಬೇಕು, ಇದೇ ರೀತಿ ಹೇಳಿ ತುರ್ತು ಪರಿಸ್ಥಿತಿ ತಂದು ಅದರ ಶಾಪದಿಂದ ಇವತ್ತು ವಿರೋಧ ಪಕ್ಷದಲ್ಲಿ ಕೂರದಷ್ಟು ಪರಿಸ್ಥಿತಿ ಕಾಂಗ್ರೆಸ್ ಗೆ ಬಂದಿದೆ. ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಈ ರೀತಿ ಹೇಳಿಕೆ ನೀಡಿದಾಗ ಅವರ ಪಕ್ಷದ ನಾಯಕರು ಕಿವಿ ಹಿಂಡಬೇಕು ಕಾಂಗ್ರೆಸ್ ನವರ ಪಾಪದ ಕೊಡ ತುಂಬುತ್ತಿದೆ. ಅವರ ತಪ್ಪಿನ ಅರಿವನ್ನು ಮಾಡಿಕೊಳ್ಳದೆ ಹೊದರೆ ಲೋಕಸಭಾ ಚುನಾವಣೆಯಲ್ಲಿ ಉತ್ತರ ಸಿಗುತ್ತದೆ ಎಂದು ರಾಘವೇಂದ್ರ ಹೇಳಿದರು.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…