Featured

ಹಿಂದುತ್ವದ ರಕ್ಷಣೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡುವ ನನಗೆ ಕಾರ್ಕಳದಲ್ಲಿ ಗೆಲುವು ನಿಶ್ಚಿತ : ಪ್ರಮೋದ್ ಮುತಾಲಿಕ್ – Vishwanews24

ಹಿಂದುತ್ವದ ರಕ್ಷಣೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡುವ ನನಗೆ ಕಾರ್ಕಳದಲ್ಲಿ ನಿಶ್ಚಿತವಾಗಿಯೂ ಗೆಲುವು ಸಿಗಲಿದೆ : ಪ್ರಮೋದ್ ಮುತಾಲಿಕ್

ಮೈಸೂರು:’‘ಹಿಂದುತ್ವದ ರಕ್ಷಣೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಲುವಾಗಿ ಕಾರ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ನನಗೆ ನಿಶ್ಚಿತವಾಗಿಯೂ ಗೆಲುವು ಸಿಗಲಿದೆ” ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬುಧವಾರ ಹೇಳಿಕೆ ನೀಡಿದ್ದಾರೆ.

ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ,”ಶಿಷ್ಟರ ರಕ್ಷಣೆಯಾಗಲಿ, ದುಷ್ಟರಿಗೆ ಶಿಕ್ಷೆಯಾಗಲಿ ಎಂದು ಬೇಡಿಕೊಳ್ಳಲು ಚಾಮುಂಡಿ ಬೆಟ್ಟಕ್ಕೆ ಹೋಗಿ ಆಶೀರ್ವಾದ ಪಡೆದುಕೊಂಡು ಹೋಗಲು ಬಂದಿದ್ದೆ” ಎಂದರು.

” ಹಾಸನ ಜಿಲ್ಲೆಯ ಬೇಲೂರಿನಲ್ಲಿ ಚನ್ನಕೇಶವಸ್ವಾಮಿ ರಥೋತ್ಸವದ ವೇಳೆ ಕುರಾನ್ ಪಠಣ ಮಾಡಿದ್ದು ಅಕ್ಷಮ್ಯ ಅಪರಾಧ.ಅಲ್ಲಿನ ಸ್ಥಳೀಯ ಜೆಡಿಎಸ್ ನಾಯಕರ ಒತ್ತಡಕ್ಕೆ ಮಣಿದು ಕುರಾನ್ ಪಠಣಕ್ಕೆ ಅವಕಾಶ ಮಾಡಿಕೊಡಲಾಗಿದೆ.ಚುನಾವಣೆ ದೃಷ್ಟಿಯಿಂದ ಕುರಾನ್ ಪಠಣಕ್ಕೆ ಜೆಡಿಎಸ್ ನಾಯಕರು ಒತ್ತಡ ಹೇರಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಲಾಗಿದೆ. ಹಾಗಾಗಿ ಅಲ್ಲಿನ ಜಿಲ್ಲಾಡಳಿತ, ಚುನಾವಣಾ ಅಧಿಕಾರಿಗಳ‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಕಿಡಿ ಕಾರಿದರು.

”ನಂಜನಗೂಡಿನ ಶ್ರೀಕಂಠೇಶ್ವಸ್ವಾಮಿ ದೇಗುಲದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣವನ್ನು ಸ್ಥಳೀಯ ಶಾಸಕರು, ಶಾದಿ ಮಹಲ್ ನಿರ್ಮಾಣಕ್ಕೆ ಬಳಕೆ ಮಾಡಿಕೊಳ್ಳಲು ಮುಂದಾಗಿರುವುದು ಖಂಡನೀಯ.ಶಾದಿ ಮಹಲ್ ನಿರ್ಮಾಣಕ್ಕೆ ದೇಗುಲದ ಹುಂಡಿ ಹಣ ಬಳಕೆ ಮಾಡಿಕೊಳ್ಳಲು ಮುಂದಾಗಿರುವ ಶಾಸಕ ನಿಲುವು ಸರಿಯಾದ ಕ್ರಮವಲ್ಲ.ಹೀಗಾಗಿ ಈ ನಿರ್ಧಾರವನ್ನು ಕೂಡಲೇ ಕೈಬಿಡಬೇಕು‌. ಧಾರ್ಮಿಕ ದತ್ತಿ ಇಲಾಖೆಯ ನಿಯಮಕ್ಕೆ ವಿರುದ್ಧವಾಗಿ ದೇಗುಲದ ಹುಂಡಿ ಹಣವನ್ನು ಶಾದಿ ಮಹಲ್ ನಿರ್ಮಾಣಕ್ಕೆ ನೀಡಬಾರದು.ದೇಗುಲದ ಹುಂಡಿ ಹಣವನ್ನು ಹಿಂದೂಗಳ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು”ಎಂದರು.

”ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೂ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡಲಾಗುತ್ತಿದೆ.ಅಕ್ರಮ ಗೋ ಸಾಗಾಟ ತಡೆಗಟ್ಟಲು ಮುಂದಾದ ಪುನಿತ್ ಕೆರೆಹಳ್ಳಿ ವಿರುದ್ಧ ಎಫ್ ಐ ಆರ್ ದಾಖಲಿಸಿರುವುದು ಸರಿಯಾದ ಕ್ರಮವಲ್ಲ.ಈ ವಿಚಾರದಲ್ಲಿ ವಿರೋಧ ಪಕ್ಷಗಳ ನಾಯಕರು ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ಧವರ ಪರ ನಿಂತಿರುವುದು ಸರಿಯಲ್ಲ.ಅಕ್ರಮ ಗೋ ಸಾಗಾಟ ತಡೆಯಲು ಮುಂದಾದವರ ಪರ ನಿಲ್ಲಬೇಕು” ಎಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago