Featured

ಹಿಂದುತ್ವದ ರಕ್ಷಣೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡುವ ನನಗೆ ಕಾರ್ಕಳದಲ್ಲಿ ಗೆಲುವು ನಿಶ್ಚಿತ : ಪ್ರಮೋದ್ ಮುತಾಲಿಕ್ – Vishwanews24

ಹಿಂದುತ್ವದ ರಕ್ಷಣೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡುವ ನನಗೆ ಕಾರ್ಕಳದಲ್ಲಿ ನಿಶ್ಚಿತವಾಗಿಯೂ ಗೆಲುವು ಸಿಗಲಿದೆ : ಪ್ರಮೋದ್ ಮುತಾಲಿಕ್

ಮೈಸೂರು:’‘ಹಿಂದುತ್ವದ ರಕ್ಷಣೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಲುವಾಗಿ ಕಾರ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ನನಗೆ ನಿಶ್ಚಿತವಾಗಿಯೂ ಗೆಲುವು ಸಿಗಲಿದೆ” ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬುಧವಾರ ಹೇಳಿಕೆ ನೀಡಿದ್ದಾರೆ.

ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ,”ಶಿಷ್ಟರ ರಕ್ಷಣೆಯಾಗಲಿ, ದುಷ್ಟರಿಗೆ ಶಿಕ್ಷೆಯಾಗಲಿ ಎಂದು ಬೇಡಿಕೊಳ್ಳಲು ಚಾಮುಂಡಿ ಬೆಟ್ಟಕ್ಕೆ ಹೋಗಿ ಆಶೀರ್ವಾದ ಪಡೆದುಕೊಂಡು ಹೋಗಲು ಬಂದಿದ್ದೆ” ಎಂದರು.

” ಹಾಸನ ಜಿಲ್ಲೆಯ ಬೇಲೂರಿನಲ್ಲಿ ಚನ್ನಕೇಶವಸ್ವಾಮಿ ರಥೋತ್ಸವದ ವೇಳೆ ಕುರಾನ್ ಪಠಣ ಮಾಡಿದ್ದು ಅಕ್ಷಮ್ಯ ಅಪರಾಧ.ಅಲ್ಲಿನ ಸ್ಥಳೀಯ ಜೆಡಿಎಸ್ ನಾಯಕರ ಒತ್ತಡಕ್ಕೆ ಮಣಿದು ಕುರಾನ್ ಪಠಣಕ್ಕೆ ಅವಕಾಶ ಮಾಡಿಕೊಡಲಾಗಿದೆ.ಚುನಾವಣೆ ದೃಷ್ಟಿಯಿಂದ ಕುರಾನ್ ಪಠಣಕ್ಕೆ ಜೆಡಿಎಸ್ ನಾಯಕರು ಒತ್ತಡ ಹೇರಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಲಾಗಿದೆ. ಹಾಗಾಗಿ ಅಲ್ಲಿನ ಜಿಲ್ಲಾಡಳಿತ, ಚುನಾವಣಾ ಅಧಿಕಾರಿಗಳ‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಕಿಡಿ ಕಾರಿದರು.

”ನಂಜನಗೂಡಿನ ಶ್ರೀಕಂಠೇಶ್ವಸ್ವಾಮಿ ದೇಗುಲದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣವನ್ನು ಸ್ಥಳೀಯ ಶಾಸಕರು, ಶಾದಿ ಮಹಲ್ ನಿರ್ಮಾಣಕ್ಕೆ ಬಳಕೆ ಮಾಡಿಕೊಳ್ಳಲು ಮುಂದಾಗಿರುವುದು ಖಂಡನೀಯ.ಶಾದಿ ಮಹಲ್ ನಿರ್ಮಾಣಕ್ಕೆ ದೇಗುಲದ ಹುಂಡಿ ಹಣ ಬಳಕೆ ಮಾಡಿಕೊಳ್ಳಲು ಮುಂದಾಗಿರುವ ಶಾಸಕ ನಿಲುವು ಸರಿಯಾದ ಕ್ರಮವಲ್ಲ.ಹೀಗಾಗಿ ಈ ನಿರ್ಧಾರವನ್ನು ಕೂಡಲೇ ಕೈಬಿಡಬೇಕು‌. ಧಾರ್ಮಿಕ ದತ್ತಿ ಇಲಾಖೆಯ ನಿಯಮಕ್ಕೆ ವಿರುದ್ಧವಾಗಿ ದೇಗುಲದ ಹುಂಡಿ ಹಣವನ್ನು ಶಾದಿ ಮಹಲ್ ನಿರ್ಮಾಣಕ್ಕೆ ನೀಡಬಾರದು.ದೇಗುಲದ ಹುಂಡಿ ಹಣವನ್ನು ಹಿಂದೂಗಳ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು”ಎಂದರು.

”ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೂ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡಲಾಗುತ್ತಿದೆ.ಅಕ್ರಮ ಗೋ ಸಾಗಾಟ ತಡೆಗಟ್ಟಲು ಮುಂದಾದ ಪುನಿತ್ ಕೆರೆಹಳ್ಳಿ ವಿರುದ್ಧ ಎಫ್ ಐ ಆರ್ ದಾಖಲಿಸಿರುವುದು ಸರಿಯಾದ ಕ್ರಮವಲ್ಲ.ಈ ವಿಚಾರದಲ್ಲಿ ವಿರೋಧ ಪಕ್ಷಗಳ ನಾಯಕರು ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ಧವರ ಪರ ನಿಂತಿರುವುದು ಸರಿಯಲ್ಲ.ಅಕ್ರಮ ಗೋ ಸಾಗಾಟ ತಡೆಯಲು ಮುಂದಾದವರ ಪರ ನಿಲ್ಲಬೇಕು” ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

22 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago