ಲಕ್ನೋ : ಶ್ರೀ ರಾಮನಿಗೆ ಕೂಡ ದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಕೆಲ ದಿನಗಳ ಹಿಂದೆ ಹೇಳಿ ಸುದ್ದಿಯಾಗಿದ್ದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಇದೀಗ ಇನ್ನೊಂದು ವಿವಾದಾತ್ಮಕ ಹೇಳಿಕೆ ನೀಡಿ ಹಿಂದುತ್ವ ಉಳಿಯಬೇಕಾದರೆ ಹಿಂದೂ ದಂಪತಿಗಳು ಕನಿಷ್ಠ 5 ಮಕ್ಕಳನ್ನು ಪಡೆಯಬೇಕು ಎಂದಿದ್ದಾರೆ.
ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು ದೇಶದಲ್ಲಿ ಹಿಂದೂಗಳ ಜನಸಂಖ್ಯೆಯನ್ನು ಹೆಚ್ಚಿಸಲು ಇದು ಅಗತ್ಯವಾಗಿದೆ ಎಂದರು. ”ಪ್ರತಿಯೊಂದು ದಂಪತಿ ಕನಿಷ್ಠ 5 ಮಕ್ಕಳನ್ನು ಪಡೆಯಬೇಕೆಂಬುದು ಪ್ರತಿಯೊಬ್ಬ ಮಹಂತನ ಆಸೆಯಾಗಿದೆ. ಈ ರೀತಿಯಾಗಿ ಜನಸಂಖ್ಯೆ ನಿಯಂತ್ರಣ ದಲ್ಲಿರುತ್ತದೆ ಹಾಗೂ ಹಿಂದುತ್ವ ಕೂಡ ಭದ್ರಗೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶದ ಬಲ್ಲಿಯ ಕ್ಷೇತ್ರದ ಶಾಸಕನಾಗಿರುವ ಸಿಂಗ್ ಈ ಹಿಂದೆ ”ಭಾರತ್ ಮಾತಾ ಕಿ ಜೈ ಹೇಳದವರು ಪಾಕಿಸ್ತಾನಿಗಳು” ಎಂದು ಹೇಳಿ ವಿವಾದಕ್ಕೀಡಾಗಿದ್ದರು. ”ಸರಕಾರಿ ಅಧಿಕಾರಿಗಳಿಗಿಂತ ಸೂಳೆಯರು ಉತ್ತಮರಾಗಿದ್ದಾರೆ,” ”ಪ್ರಧಾನಿ ನರೇಂದ್ರ ಮೋದಿ ಶ್ರೀ ರಾಮನ ಅವತಾರ” ಹಾಗೂ ”ಮೊಬೈಲ್ ಗಳು ಅತ್ಯಾಚಾರಕ್ಕೆ ಕಾರಣ” ಎಂಬಿತ್ಯಾದಿ ಹೇಳಿಕೆಗಳಿಂದಲೂ ಅವರು ಸುದ್ದಿಯಾಗಿದ್ದರು.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…