ಲಕ್ನೋ : ಶ್ರೀ ರಾಮನಿಗೆ ಕೂಡ ದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಕೆಲ ದಿನಗಳ ಹಿಂದೆ ಹೇಳಿ ಸುದ್ದಿಯಾಗಿದ್ದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಇದೀಗ ಇನ್ನೊಂದು ವಿವಾದಾತ್ಮಕ ಹೇಳಿಕೆ ನೀಡಿ ಹಿಂದುತ್ವ ಉಳಿಯಬೇಕಾದರೆ ಹಿಂದೂ ದಂಪತಿಗಳು ಕನಿಷ್ಠ 5 ಮಕ್ಕಳನ್ನು ಪಡೆಯಬೇಕು ಎಂದಿದ್ದಾರೆ.
ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು ದೇಶದಲ್ಲಿ ಹಿಂದೂಗಳ ಜನಸಂಖ್ಯೆಯನ್ನು ಹೆಚ್ಚಿಸಲು ಇದು ಅಗತ್ಯವಾಗಿದೆ ಎಂದರು. ”ಪ್ರತಿಯೊಂದು ದಂಪತಿ ಕನಿಷ್ಠ 5 ಮಕ್ಕಳನ್ನು ಪಡೆಯಬೇಕೆಂಬುದು ಪ್ರತಿಯೊಬ್ಬ ಮಹಂತನ ಆಸೆಯಾಗಿದೆ. ಈ ರೀತಿಯಾಗಿ ಜನಸಂಖ್ಯೆ ನಿಯಂತ್ರಣ ದಲ್ಲಿರುತ್ತದೆ ಹಾಗೂ ಹಿಂದುತ್ವ ಕೂಡ ಭದ್ರಗೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶದ ಬಲ್ಲಿಯ ಕ್ಷೇತ್ರದ ಶಾಸಕನಾಗಿರುವ ಸಿಂಗ್ ಈ ಹಿಂದೆ ”ಭಾರತ್ ಮಾತಾ ಕಿ ಜೈ ಹೇಳದವರು ಪಾಕಿಸ್ತಾನಿಗಳು” ಎಂದು ಹೇಳಿ ವಿವಾದಕ್ಕೀಡಾಗಿದ್ದರು. ”ಸರಕಾರಿ ಅಧಿಕಾರಿಗಳಿಗಿಂತ ಸೂಳೆಯರು ಉತ್ತಮರಾಗಿದ್ದಾರೆ,” ”ಪ್ರಧಾನಿ ನರೇಂದ್ರ ಮೋದಿ ಶ್ರೀ ರಾಮನ ಅವತಾರ” ಹಾಗೂ ”ಮೊಬೈಲ್ ಗಳು ಅತ್ಯಾಚಾರಕ್ಕೆ ಕಾರಣ” ಎಂಬಿತ್ಯಾದಿ ಹೇಳಿಕೆಗಳಿಂದಲೂ ಅವರು ಸುದ್ದಿಯಾಗಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…