ನವದೆಹಲಿ: ಹಿಂದುತ್ವದ ಸಿದ್ಧಾಂತ ಎನ್ನುವುದು ಎಡವೂ ಅಲ್ಲ, ಬಲವೂ ಅಲ್ಲ ಎಂದು ಆರ್ಎಸ್ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಶುಕ್ರವಾರ ಹೇಳಿದ್ದಾರೆ.
ಆರೆಸ್ಸೆಸ್ ನಾಯಕ ರಾಮ್ ಮಾಧವ್ ಬರೆದಿರುವ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು” ಜಗತ್ತು ಎಡಕ್ಕೆ ಹೋಗಿದೆ, ಅಥವಾ ಎಡಕ್ಕೆ ಹೋಗಲು ಬಲವಂತವಾಗಿ ಕರೆದೊಯ್ಯಲಾಯಿತು. ಆದರೆ ಸದ್ಯದ ಪರಿಸ್ಥಿತಿಯು ಬದಲಾಗಿದ್ದು ಜಗತ್ತು ಬಲಕ್ಕೆ ಚಲಿಸುತ್ತಿದೆ, ಆದ್ದರಿಂದ ಇದೀಗ ಕೇಂದ್ರದಲ್ಲಿದೆ. . ಹಿಂದುತ್ವ ಎಂದರೆ ಎಡವೂ ಅಲ್ಲ, ಬಲವೂ ಅಲ್ಲ. ಎಲ್ಲವನ್ನು ಒಳಗೊಳ್ಳುವುದು ಇದರ ಸಿದ್ಧಾಂತ ” ಎಂದು ಹೇಳಿದರು.
ಬ್ರಿಟಿಷ್ ವಸಾಹತುಶಾಹಿ ವ್ಯವಸ್ಥೆಯಿಂದ ಎರವಲು ಪಡೆದ ಭಾರತೀಯ ನ್ಯಾಯಾಂಗ ವ್ಯವಸ್ಥೆಯು ರಾಷ್ಟ್ರಕ್ಕೆ ಪ್ರಸ್ತುತವಲ್ಲ ಎಂದು ಹೊಸಬಾಳೆ ಹೇಳಿದರು. ಅವರ ವಾದವನ್ನು ಮತ್ತಷ್ಟು ಪುಷ್ಟೀಕರಿಸಲು, ಅವರು ಮಹಾತ್ಮ ಗಾಂಧಿಯವರ ಹಿಂದ್ ಸ್ವರಾಜ್ ಪ್ರವಚನ ಮತ್ತು ಭಾರತದ ನ್ಯಾಯಾಂಗ ವ್ಯವಸ್ಥೆಯು ದೇಶಕ್ಕೆ ಸರಿಹೊಂದುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಾಧೀಶರ ಇತ್ತೀಚಿನ ಹೇಳಿಕೆಯನ್ನು ಉಲ್ಲೇಖಿಸಿದರು.
ಹಿಂದುತ್ವದ ಸರ್ವವ್ಯಾಪಕ ಬಗ್ಗೆ ಮಾತನಾಡಿದ ಹೊಸಬಾಳೆಯವರು , ಹಿಂದುತ್ವದ ಮೂಲತತ್ವವೆಂದರೆ ಪ್ರತಿಯೊಂದು ಮೂಲೆಯಿಂದಲೂ ಅತ್ಯುತ್ತಮವಾದದ್ದನ್ನು ತೆಗೆದುಕೊಂಡು ಅದನ್ನು ನಿಮ್ಮ ಅಗತ್ಯಗಳಿಗೆ, ಸುತ್ತಮುತ್ತಲಿನ ಮತ್ತು ಜೀವನಕ್ಕೆ ತಕ್ಕಂತೆ ರೂಪಿಸುವುದು ಎಂದು ಹೇಳಿದರು.
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…