Featured

ಹಿಂದುಯೇತರ ವ್ಯಕ್ತಿಯಿಂದ ಆಹಾರ ಡೆಲಿವರಿ : ಆರ್ಡರ್ ಅನ್ನೇ ಕ್ಯಾನ್ಸಲ್ ಮಾಡಿದ ಗ್ರಾಹಕ : ಆಹಾರಕ್ಕೆ ಯಾವುದೇ ಧರ್ಮವಿಲ್ಲ. ಆಹಾರವೇ ಒಂದು ಧರ್ಮ : ಗ್ರಾಹಕನಿಗೆ ಖಡಕ್ ತಿರುಗೇಟು ನೀಡಿದ ಜೋಮ್ಯಾಟೋ -Vishwanews24

ನವದೆಹಲಿ: ಹಿಂದುಯೇತರ ವ್ಯಕ್ತಿ ಡೆಲಿವರಿ ಮಾಡಲು ಬಂದಿದ್ದ ಅಂತ ಆರ್ಡರ್ ಅನ್ನೇ ಕ್ಯಾನ್ಸಲ್ ಮಾಡಿರುವ ಘಟನೆಯೊಂದು ವರದಿಯಾಗಿದೆ.

ಆರ್ಡರ್ ಮಾಡಿ ನಂತರ ಕ್ಯಾನ್ಸಲ್ ಮಾಡಿರುವ ಅಮಿತ್ ಶುಕ್ಲಾ ಎಂಬಾತ ತನ್ನ ಟ್ವೀಟರ್ ನಲ್ಲಿ ನಾನು ಜೋಮ್ಯಾಟೋ ಆರ್ಡರ್ ಕ್ಯಾನ್ಸಲ್ ಮಾಡಿದ್ದೇನೆ. ಕಾರಣ ಹಿಂದೂ ಅಲ್ಲದ ವ್ಯಕ್ತಿಯ ಕೈಯಲ್ಲಿ ನನಗೆ ಆಹಾರ ಕಳುಹಿಸಲಾಗಿತ್ತು. ನಾನು ಡೆಲಿವರಿ ಬಾಯ್ ನನ್ನ ಬದಲಿಸುವ ಎಂತ ಕೇಳಿದ್ದಕ್ಕೆ ಸಂಸ್ಥೆಯವರು ಆಗಲ್ಲ ಎಂದಿದ್ದಾರೆ ಎಂದು ಬರೆದುಕೊಂಡಿದ್ದರು.

ಆರ್ಡರ್ ಕ್ಯಾನ್ಸಲ್ ಮಾಡಿದ್ದಕ್ಕೆ ಸಂಸ್ಥೆಯವರು ಹಣ ರಿಫಂಡ್ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಮಿತ್, “ನೀವು ಡೆಲಿವರಿ ತೆಗೆದುಕೊಳ್ಳುವಂತೆ ನನ್ನ ಮೇಲೆ ಒತ್ತಡ ಹಾಕುವಂತಿಲ್ಲ ಮತ್ತು ನನಗೆ ನಿಮ್ಮ ರಿಫಂಡ್ ಸಹ ಬೇಕಿಲ್ಲ. ಹಾಗಾಗಿ ಆರ್ಡರ್ ಕ್ಯಾನ್ಸಲ್ ಮಾಡಿ” ಎಂದು ಟ್ವೀಟರ್’ನಲ್ಲಿ ಜೋಮ್ಯಾಟೋಗೆ ಟ್ಯಾಗ್ ಮಾಡಿದ್ದಾರೆ.

ಇದಕ್ಕೆ ಜೋಮ್ಯಾಟೋ ಪ್ರತಿಕ್ರಿಯಿಸಿದ್ದು, “ಆಹಾರಕ್ಕೆ ಯಾವುದೇ ಧರ್ಮವಿಲ್ಲ. ಆಹಾರವೇ ಒಂದು ಧರ್ಮ” ಎಂದು ಚಿಕ್ಕದಾಗಿ ಬರೆದು ಗ್ರಾಹಕನಿಗೆ ಖಡಕ್ ತಿರುಗೇಟು ನೀಡಿದೆ.

ಇನ್ನು ಇದಕ್ಕೆ ಜೋಮ್ಯಾಟೋ ಸ್ಥಾಪಕ ದೀಪೇಂದ್ರ ಗೊಯಲ್, ನಮಗೆ ಐಡಿಯಾ ಆಫ್ ಇಂಡಿಯಾ, ಗೌರವಯುತ ಗ್ರಾಹಕರು ಮತ್ತು ಪಾಟ್ನರ್‌ಗಳ ವಿವಿಧತೆಯ ಬಗ್ಗೆ ಹೆಮ್ಮೆ ಇದೆ. ಆದರೆ ನಮ್ಮ ಮೌಲ್ಯಗಳಿಗೆ ಅಡ್ಡಿಯುಂಟು ಮಾಡುವ ವ್ಯವಹಾರವನ್ನು ಕಳೆದುಕೊಳ್ಳುವುದರಿಂದ ನಮಗೆ ಯಾವುದೇ ರೀತಿಯ ದುಃಖ ಆಗಲಾರದು ಎಂದು ಬರೆದು ತ್ರಿವರ್ಣ ಧ್ವಜದ ಟಿಕ್ಕರ್ ಹಾಕಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago