ಬೆಂಗಳೂರು: ಲವ್ ಜಿಹಾದ್ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ಸರ್ಕಾರ ಚಿಂತನೆ ಹಿನ್ನೆಲೆ ಇಂದು ಮುಸ್ಲಿಂ ಮುಖಂಡರ ನಿಯೋಗ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಿತ್ತು. ಈ ವೇಳೆ ಮಾತಾಡಿದ ಸಿದ್ದರಾಮಯ್ಯ, ಕೇಂದ್ರ ವಿವೇಕ ಇಲ್ಲದೆ ಕಾನೂನು ತರುತ್ತಿದೆ. ಮದುವೆ ಅವರವರ ವೈಯುಕ್ತಿಕ ಆಯ್ಕೆ. ಈ ದೇಶದಲ್ಲಿ ಮುಸಲ್ಮಾನರು ಮೊಘಲರು 600 ವರ್ಷಗಳಿಂದ ಇದ್ದಾರೆ. ಎಷ್ಟೋ ಸಂಬಂಧಗಳು ಬೆಳೆದು ಬಿಟ್ಟಿದ್ದಾವೆ ಎಂದರು.
ಇದೇ ವೇಳೆ ಹಿಂದೂ- ಮುಸ್ಲಿಂ ಕ್ರಾಸ್ ಆಗಿ ಹುಟ್ಟಿದವರು ಬಹಳ ಜನ ಇದ್ದಾರೆ. ನನ್ನ ಪ್ರಕಾರ ಇದೊಂದು ಮೂರ್ಖತನ. ಇದನ್ನು ಸಂವಿಧಾನ ಅನುಮತಿಸುವುದಿಲ್ಲ. ಕೋರ್ಟಿಗೆ ಹೋದರೆ ವಜಾ ಆಗುತ್ತವೆ. ವಯಸ್ಸಿಗೆ ಬಂದ ಹೆಣ್ಣು ಅಥವಾ ಗಂಡು ಅವರ ಇಚ್ಛೆಯಂತೆ ಬದುಕಬಹುದು ಎಂದು ಇತ್ತೀಚೆಗಷ್ಟೇ ಅಲಹಬಾದ್ ಹೈಕೋರ್ಟ್ ಹೇಳಿದೆ. ತೀರ್ಪಿನ ನಂತರವೂ ಕೇಂದ್ರ ಕಾನೂನು ಜಾರಿಗೆ ಮುಂದಾಗಿರುವುದು ದುರುದ್ದೇಶದ ಸಂಗತಿ ಆಗಿದೆ ಎಂದರು.
ದೇಶದಲ್ಲಿ 600 ವರ್ಷಗಳ ಕಾಲ ಮೊಗಲರು ಆಳ್ವಿಕೆ ನಡೆಸಿದ್ದರು. ಅವಾಗ ಏಷ್ಟೋ ಸಂಬಂಧಗಳು ಬೆಳೆದುಬಿಟ್ಟಿವೆ. ಹಿಂದು ಮುಸ್ಲಿಂ ಕ್ರಾಸ್ ಆಗಿ ಹುಟ್ಟಿದವರು ಬಹಳ ಜನ ಇದ್ದಾರೆ. ಇಂತಹ ಸಂದರ್ಭದಲ್ಲಿ ಲವ್ ಜಿಹಾದ್ ತಡೆ ಕಾಯ್ದೆ ಮೂರ್ಖತನ. ಇದಕ್ಕೆ ಸಂವಿಧಾನ ಅವಕಾಶ ಕೊಡಲ್ಲ ಎಂದರು.
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…