ಬೆಂಗಳೂರು: ಹಿಂದೂಗಳು ರಾಮಮಂದಿರ ಕಟ್ಟುವುದರಲ್ಲಿ, ಮುಸ್ಲಿಂರು ಮಸೀದಿ ಕಟ್ಟುವುದರಲ್ಲಿ ಸಂತಸದಿಂದ ಮುಂದಾಗುತ್ತಿರುವುದು ಕಂಡು ನನಗೆ ಖುಷಿ ಆಗುತ್ತಿದೆ. ಆದ್ರೆ, ನಿಜವಾದ ಸಂತೋಷ ಒಗ್ಗಟ್ಟಿನಲ್ಲಿದೆ ಎಂದು ಕಾಂಗ್ರೆಸ್ ಮಾಜಿ ಸಂಸದೆ, ನಟಿ ರಮ್ಯಾ ಹೇಳಿದ್ದಾರೆ.
ರಾಮಮಂದಿರ ವಿಚಾರವಾಗಿ ಮೊದಲ ಬಾರಿಗೆ ಫೇಸ್ಬುಕ್ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ರಮ್ಯಾ, ಹಿಂದೂಗಳು ಸಂತೋಷದಿಂದ ರಾಮ ಮಂದಿರ ನಿರ್ಮಾಣ ಮಾಡಲು ಮುಂದಾಗುತ್ತಿರುವುದನ್ನು ಕಂಡು ನನಗೆ ಸಂತಸವಿದೆ. ಮುಸ್ಲಿಮರು ಸಂತೋಷದಿಂದ ಮಸೀದಿ ನಿರ್ಮಾಣಕ್ಕೆ ಮುಂದಾಗಿರುವುದನ್ನು ನೋಡಿ ನನಗೆ ಸಂತಸವಿದೆ. ಆದರೆ ಇಬ್ಬರೂ ಸಂತೋಷವಾಗಿರಲು ಅಥವಾ ದೇವರನ್ನು ಅರಿತುಕೊಳ್ಳಲು ದೇವಾಲಯ ಅಥವಾ ಮಸೀದಿ ಅಗತ್ಯವಿಲ್ಲ ಎಂದು ಅವರಿಗೆ ತಿಳಿದಾಗ ನನಗೆ ಹೆಚ್ಚು ಸಂತೋಷವಾಗುತ್ತದೆ. ನಿಜವಾದ ಸಂತೋಷ ಒಗ್ಗಟ್ಟಿನಲ್ಲಿದೆ. ಹೊರಗಡೆ ದೇವರಿಲ್ಲ. ದೇವರು ನಮ್ಮ ಒಳಗಡೆಯೇ ಇದ್ದಾನೆ ಎಂದು ಬರೆದುಕೊಂಡಿದ್ದಾರೆ. ಇನ್ನು ರಾಜಕೀಯಕ್ಕೆ ಬಲಿಯಾಗಬೇಡಿ. ರಾಜಕೀಯ ಶಕ್ತಿ ಮತ್ತು ನಿಯಂತ್ರಣಕ್ಕಾಗಿ ಸೃಷ್ಟಿಸುವ ಬಿಕ್ಕಟ್ಟಿಗೆ ಬಲಿಯಾಗಬೇಡಿ. ಪ್ರಶ್ನಿಸುವ ಮೂಲಕ ಉತ್ತುಂಗಕ್ಕೆ ಏರಿ ಎಂದು ಹೇಳಿದ್ದಾರೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…