Featured

ಹಿಂದೂಗಳ ಜಾತ್ರೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ನಿಷೇಧ ಹೇರಿರುವುದಕ್ಕೆ ಬಿಜೆಪಿ ಕುಮ್ಮಕ್ಕು ನೀಡುತ್ತಿದೆ: ಯು ಟಿ ಖಾದರ್ – Vishwanews24

ಇದೊಂದು ಅಸಹ್ಯ ಕೃತ್ಯವಾಗಿದೆ,  ಹಿಂದೂ ಸಹೋದರರು ಬೆಂಬಲ ಕೊಡಬಾರದು..

ಬೆಂಗಳೂರು: ಹಿಂದೂಗಳ ಜಾತ್ರೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ನಿಷೇಧ ಹೇರಿರುವುದಕ್ಕೆ ಬಿಜೆಪಿ ಕುಮ್ಮಕ್ಕು ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಯು ಟಿ ಖಾದರ್ ಆರೋಪಿಸಿದ್ದಾರೆ. ಈ ವಿಚಾರವಾಗಿ ಬಿಜೆಪಿ ಸರ್ಕಾರ ಮೌನವಾಗಿದ್ದು, ಒಳಗೊಳಗೆ ಖುಷಿ ಪಡುತ್ತಿದೆಯಾ? ಎಂದು ವಿಧಾನಸಭೆಯ ಕಾಂಗ್ರೆಸ್ ಉಪನಾಯಕ ಯು.ಟಿ ಖಾದರ್ ಪ್ರಶ್ನಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ ದೇಶ ವಿವಿಧತೆಯಲ್ಲಿ ಏಕತೆ ಹೊಂದುರುವ ದೇಶವಾಗಿದೆ. ಇಲ್ಲಿ ಎಲ್ಲಾ ಧರ್ಮೀಯರು ಸಹಬಾಳ್ವೆಯಿಂದ ಬದುಕುತ್ತಿದ್ದಾರೆ. ಆದರೆ ಕೆಲವರು ಧರ್ಮಗಳ ನಡುವೆ ಕಂದಕವನ್ನ ಸೃಷ್ಟಿಸುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಕರಾವಳಿ ಭಾಗದಲ್ಲಿ ಕೆಲ ಹಿತಾಸಕ್ತಿಗಳು ಭಿತ್ತಿ ಪತ್ರಗಳನ್ನ ಹಾಕುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ, ದ್ವೇಷ ಸೃಷ್ಟಿಸಲು ಹೊರಟಿದ್ದಾರೆ. ಮುಲ್ಕಿ ಸೇರಿದಂತೆ ಕೆಲವೆಡೆ ಭಿತ್ತಿ ಪತ್ರಗಳನ್ನ ಹಾಕಲಾಗಿದೆ. ಇದೊಂದು ಅಸಹ್ಯ ಕೃತ್ಯವಾಗಿದೆ. ಹಿಂದೂ ಸಹೋದರರು ಬೆಂಬಲ ಕೊಡಬಾರದು ಎಂದು ಮನವಿ ಮಾಡಿದ್ದಾರೆ.

ಜಾತ್ರೆಗಳಲ್ಲಿ ಮುಸ್ಲಿಂ ಸಮುದಾಯದವರು ವ್ಯಾಪಾರ ನಡೆಸುವುದಕ್ಕೆ ಹಿಂದೂ ಸಂಘಟನೆಗಳ ವಿರೋಧ ವ್ಯಕ್ತಪಡಿಸುತ್ತಿದೆ. ಈ ವಿಚಾರವಾಗಿ ಬಿಜೆಪಿ ಸರ್ಕಾರ ಈ ವಿಚಾರವಾಗಿ ಮೌನವಾಗಿದೆ. ಒಳಗೊಳಗೆ ಖುಷಿ ಪಡುತ್ತಿದೆಯಾ? ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಆಢಳಿತ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ.

Vishwa News 24

Recent Posts

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

54 minutes ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

1 hour ago

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ -vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ ನಾನು ಸತ್ಯವನ್ನೇ ಹೇಳುತ್ತೇನೆ.. ಮಾಫಿ ಸಾಕ್ಷಿಯಾಗಿ ಪರಿಗಣಿಸಿ…

2 hours ago

ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು -vishwanews24

ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು ಮಂಗಳೂರು: ಸುರತ್ಕಲ್ ಸಮೀಪದ ಕೋಟೆ…

2 hours ago

ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು -vishwanews24

ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ…

3 hours ago