ಶಿವಮೊಗ್ಗ: ನಮ್ಮ ರಕ್ಷಣೆ ನೀವು ಮಾಡುತ್ತೀರಾ ಇಲ್ಲ ನಾವೇ ಮಾಡಿಕೊಳ್ಳಬೇಕಾ ಎಂದು ಚಕ್ರವರ್ತಿ ಸೂಲಿಬೆಲೆ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.
ಇಂದು ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಬ್ ವಿರುದ್ಧ ಹರ್ಷ ಗಲಾಟೆ ಮಾಡುತ್ತಿದ್ದರಿಂದ ಕೊಂದಿರುವುದಾಗಿ ಹೇಳಲಾಗುತ್ತಿದೆ. ಆದರೆ ಇದರ ಹಿಂದಿನ ಸತ್ಯವನ್ನು ಬಯಲಿಗೆ ಎಳಬೇಕು. ಆರೋಪಿಗಳಿಗೆ ಸರಿಯಾದ ಶಿಕ್ಷೆ ನೀಡಲಿಲ್ಲ ಎಂದರೆ ಮುಂದೆ ಈ ರೀತಿಯ ಘಟನೆಗಳು ನಡೆಯುತ್ತಲೇ ಇರುತ್ತದೆ. ಇಂತಹ ಘಟನೆಗಳನ್ನು ತಡೆಯಬೇಕು ಎಂಬುವುದು ಸರ್ಕಾರಕ್ಕೆ ಅರಿವಾಗಬೇಕು. ಹಿಂದೂಗಳ ಸಮಾಧಿ ಮೇಲೆ ಸರ್ಕಾರ ಕಟ್ಟಿಕೊಂಡವರು ಇನ್ನೂ ಹಿಂದೂಗಳ ಸಮಾಧಿಗೆ ಕಾರಣರಾಗುತ್ತಿದ್ದಾರೆ ಎಂದರೆ ಇದನ್ನು ಎಂದಿಗೂ ನಾನು ಒಪ್ಪಿಕೊಳ್ಳಲು ಸಾಧ್ಯವಿಲ್ಲ.
ಭಾರತದಲ್ಲಿ ವಾಹಬಿಗಳ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ. 2% ಇದ್ದದ್ದು, 25% ಆಗಿದೆ ಎಂದು ಮುಸಲ್ಮಾನರೇ ಹೇಳುತ್ತಿದ್ದಾರೆ. ಇದು ಬಹಳ ಅಪಾಯಕಾರಿ ಸಂಗತಿ. ಮುಂದೆ ಇದರಿಂದ ಧಂಗೆ ಕಾರಣವಾಗುವುದರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ.
ಇದನ್ನೂ ಓದಿ :
ಗೃಹ ಸಚಿವರ ತವರು ಜಿಲ್ಲೆಯಲ್ಲೇ ಈ ರೀತಿ ಆಗಿರುವುದು ದುರದೃಷ್ಟಕರ. ಹಾಗಾಗಿ ನೀವು ನಮ್ಮನ್ನು ರಕ್ಷಣೆ ಮಾಡುತ್ತೀರಾ ಅಥವಾ ನಮ್ಮನ್ನು ನಾವೇ ರಕ್ಷಿಸಿಕೊಳ್ಳಬೇಕೋ ಎಂದು ಪ್ರಶ್ನಿಸುತ್ತೇನೆ. ನಿನ್ನೆ ಹತ್ಯೆಯಾಗಿದೆ. ಇಂದು ಶಾಂತವಾಗಿದೆ ಎಂಬುವುದು ಖುಷಿ ಪಡುವ ವಿಚಾರವೋ, ಬೇಸರದ ವಿಚಾರವೋ ಗೊತ್ತಿಲ್ಲ. ಹರ್ಷನ ಹತ್ಯೆ 6 ತಿಂಗಳಾದರೂ ಮರೆಯಾಗುವುದಿಲ್ಲ. ಆತನ ಸಾವಿಗೆ ಪರಿಹಾರ ಕೊಡುತ್ತೇವೆ ಅಂದರೆ ಮಾತ್ರ ಇದನ್ನು ಮುಕ್ತಾಯಗೊಳಿಸಬಹುದು. ಇಲ್ಲವಾದರೆ 3-4 ತಿಂಗಳಿಗೊಮ್ಮೆ ಈ ರೀತಿಯ ಹತ್ಯೆ ಮರುಕಳಿಸುತ್ತಿರುತ್ತದೆ ಎಂದು ಹೇಳಿದ್ದಾರೆ.
ಹಿಂದೂ ಹೆಸರು ಹೇಳಿಕೊಂಡು ಆಚೆ ಬರುವವರು ಹೆದರಿಕೊಳ್ಳಬೇಕು. ಹಿಂದೂಗಳು ಮನೆಯಲ್ಲಿ ಇರಬೇಕು ಎಂಬುವುದು ಮುಸಲ್ಮಾನರ ಉದ್ದೇಶ. ಅಕ್ಬರ್, ಬಾಬರ್ ಅದೇ ಕಾಲಕ್ಕೆ ನಾವು ಮರಳುತ್ತಿದ್ದೇವೆ ಎಂದರೆ ಏನು ಅರ್ಥ. ಈ ವಿಚಾರ ಇನ್ನೂ ವ್ಯಾಪಕವಾಗಬೇಕು. ಸರ್ಕಾರ ಏನೇ ಹೇಳಿದರೂ ಯಾವುದು ಸಮಾಧಾನ ನೀಡುವುದಿಲ್ಲ. ಈ ಘಟನೆಗೆ ಸೂಕ್ತವಾದ ಪರಿಹಾರ ನೀಡಿದಾಗ ಮಾತ್ರ ಸರ್ಕಾರದ ಮೇಲೆ ಜನರಿಗೆ ವಿಶ್ವಾಸ ಮೂಡುತ್ತದೆ ಎಂದಿದ್ದಾರೆ.
ಇದನ್ನೂ ಓದಿ :
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…