Featured

ಹಿಂದೂಗಳ ಸಮಾಧಿ ಮೇಲೆ ಸರ್ಕಾರ ಕಟ್ಟಿಕೊಂಡವರು ಇಂದು ಹಿಂದೂಗಳ ಸಮಾಧಿಗೆ ಕಾರಣರಾಗುತ್ತಿದ್ದಾರೆ ಎಂದರೆ ಇದನ್ನು ಎಂದಿಗೂ ನಾನು ಒಪ್ಪಿಕೊಳ್ಳಲು ಸಾಧ್ಯವಿಲ್ಲ : ಚಕ್ರವರ್ತಿ ಸೂಲಿಬೆಲೆ – Vishwanews24

ನಮ್ಮ ರಕ್ಷಣೆ ನೀವು ಮಾಡುತ್ತೀರಾ ಇಲ್ಲ ನಾವೇ ಮಾಡಿಕೊಳ್ಳಬೇಕಾ..?

ಈ ಘಟನೆಗೆ ಸೂಕ್ತವಾದ ಪರಿಹಾರ ನೀಡಿದಾಗ ಮಾತ್ರ ಸರ್ಕಾರದ ಮೇಲೆ ಜನರಿಗೆ ವಿಶ್ವಾಸ ಮೂಡುತ್ತದೆ ..

ಶಿವಮೊಗ್ಗ: ನಮ್ಮ ರಕ್ಷಣೆ ನೀವು ಮಾಡುತ್ತೀರಾ ಇಲ್ಲ ನಾವೇ ಮಾಡಿಕೊಳ್ಳಬೇಕಾ ಎಂದು ಚಕ್ರವರ್ತಿ ಸೂಲಿಬೆಲೆ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಬ್ ವಿರುದ್ಧ ಹರ್ಷ ಗಲಾಟೆ ಮಾಡುತ್ತಿದ್ದರಿಂದ ಕೊಂದಿರುವುದಾಗಿ ಹೇಳಲಾಗುತ್ತಿದೆ. ಆದರೆ ಇದರ ಹಿಂದಿನ ಸತ್ಯವನ್ನು ಬಯಲಿಗೆ ಎಳಬೇಕು. ಆರೋಪಿಗಳಿಗೆ ಸರಿಯಾದ ಶಿಕ್ಷೆ ನೀಡಲಿಲ್ಲ ಎಂದರೆ ಮುಂದೆ ಈ ರೀತಿಯ ಘಟನೆಗಳು ನಡೆಯುತ್ತಲೇ ಇರುತ್ತದೆ. ಇಂತಹ ಘಟನೆಗಳನ್ನು ತಡೆಯಬೇಕು ಎಂಬುವುದು ಸರ್ಕಾರಕ್ಕೆ ಅರಿವಾಗಬೇಕು. ಹಿಂದೂಗಳ ಸಮಾಧಿ ಮೇಲೆ ಸರ್ಕಾರ ಕಟ್ಟಿಕೊಂಡವರು ಇನ್ನೂ ಹಿಂದೂಗಳ ಸಮಾಧಿಗೆ ಕಾರಣರಾಗುತ್ತಿದ್ದಾರೆ ಎಂದರೆ ಇದನ್ನು ಎಂದಿಗೂ ನಾನು ಒಪ್ಪಿಕೊಳ್ಳಲು ಸಾಧ್ಯವಿಲ್ಲ.

ಭಾರತದಲ್ಲಿ ವಾಹಬಿಗಳ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ. 2% ಇದ್ದದ್ದು, 25% ಆಗಿದೆ ಎಂದು ಮುಸಲ್ಮಾನರೇ ಹೇಳುತ್ತಿದ್ದಾರೆ. ಇದು ಬಹಳ ಅಪಾಯಕಾರಿ ಸಂಗತಿ. ಮುಂದೆ ಇದರಿಂದ ಧಂಗೆ ಕಾರಣವಾಗುವುದರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ :

ಗೃಹ ಸಚಿವರ ತವರು ಜಿಲ್ಲೆಯಲ್ಲೇ ಈ ರೀತಿ ಆಗಿರುವುದು ದುರದೃಷ್ಟಕರ. ಹಾಗಾಗಿ ನೀವು ನಮ್ಮನ್ನು ರಕ್ಷಣೆ ಮಾಡುತ್ತೀರಾ ಅಥವಾ ನಮ್ಮನ್ನು ನಾವೇ ರಕ್ಷಿಸಿಕೊಳ್ಳಬೇಕೋ ಎಂದು ಪ್ರಶ್ನಿಸುತ್ತೇನೆ. ನಿನ್ನೆ ಹತ್ಯೆಯಾಗಿದೆ. ಇಂದು ಶಾಂತವಾಗಿದೆ ಎಂಬುವುದು ಖುಷಿ ಪಡುವ ವಿಚಾರವೋ, ಬೇಸರದ ವಿಚಾರವೋ ಗೊತ್ತಿಲ್ಲ. ಹರ್ಷನ ಹತ್ಯೆ 6 ತಿಂಗಳಾದರೂ ಮರೆಯಾಗುವುದಿಲ್ಲ. ಆತನ ಸಾವಿಗೆ ಪರಿಹಾರ ಕೊಡುತ್ತೇವೆ ಅಂದರೆ ಮಾತ್ರ ಇದನ್ನು ಮುಕ್ತಾಯಗೊಳಿಸಬಹುದು. ಇಲ್ಲವಾದರೆ 3-4 ತಿಂಗಳಿಗೊಮ್ಮೆ ಈ ರೀತಿಯ ಹತ್ಯೆ ಮರುಕಳಿಸುತ್ತಿರುತ್ತದೆ ಎಂದು ಹೇಳಿದ್ದಾರೆ.

ಹಿಂದೂ ಹೆಸರು ಹೇಳಿಕೊಂಡು ಆಚೆ ಬರುವವರು ಹೆದರಿಕೊಳ್ಳಬೇಕು. ಹಿಂದೂಗಳು ಮನೆಯಲ್ಲಿ ಇರಬೇಕು ಎಂಬುವುದು ಮುಸಲ್ಮಾನರ ಉದ್ದೇಶ. ಅಕ್ಬರ್, ಬಾಬರ್ ಅದೇ ಕಾಲಕ್ಕೆ ನಾವು ಮರಳುತ್ತಿದ್ದೇವೆ ಎಂದರೆ ಏನು ಅರ್ಥ. ಈ ವಿಚಾರ ಇನ್ನೂ ವ್ಯಾಪಕವಾಗಬೇಕು. ಸರ್ಕಾರ ಏನೇ ಹೇಳಿದರೂ ಯಾವುದು ಸಮಾಧಾನ ನೀಡುವುದಿಲ್ಲ. ಈ ಘಟನೆಗೆ ಸೂಕ್ತವಾದ ಪರಿಹಾರ ನೀಡಿದಾಗ ಮಾತ್ರ ಸರ್ಕಾರದ ಮೇಲೆ ಜನರಿಗೆ ವಿಶ್ವಾಸ ಮೂಡುತ್ತದೆ ಎಂದಿದ್ದಾರೆ.

ಇದನ್ನೂ ಓದಿ :

 

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

21 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

21 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

21 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

21 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

21 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago