ಬೆಂಗಳೂರು: ದತ್ತಪೀಠದಲ್ಲಿ ಪೂಜೆಗೆ ಮೌಲ್ವಿ ನೇಮಕ ಮಾಡಿದ್ದ ಹಿಂದಿನ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್, ಪೂಜಾ ವಿಧಾನದ ಕುರಿತು ಹೊಸದಾಗಿ ತೀರ್ಮಾನ ತೆಗೆದುಕೊಳ್ಳುವಂತೆ ನೀಡಿರುವ ಆದೇಶವನ್ನು ರಾಜ್ಯ ಬಿಜೆಪಿ ಮುಖಂಡರು ಸ್ವಾಗತಿಸಿದ್ದಾರೆ.
ದತ್ತ ಪೀಠದ ವಿಚಾರದಲ್ಲಿ ಹಿಂದೂಗಳ ಹೋರಾಟಕ್ಕೆ ಜಯ ಸಿಕ್ಕಿದೆ. ದತ್ತ ಮಾಲಾಧಾರಿಗಳು ಮತ್ತು ದತ್ತ ಪೀಠದ ಮೇಲೆ ನಂಬಿಕೆ ಇರಿಸಿರುವ ಅಸಂಖ್ಯಾತ ಭಕ್ತರಿಗೆ ಶುಭ ವಿಚಾರ ಬಂದಿದೆ. ಹೈಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸುತ್ತೇನೆ. ಯಾವತ್ತೂ ಸತ್ಯಕ್ಕೆ ಜಯ ಖಚಿತ ಎಂಬುದು ಇದರಿಂದ ಋಜುವಾತಾಗಿದೆ. ಮೌಲ್ವಿ ನೇಮಕ ಆದೇಶ ರದ್ದು ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಮೌಲ್ವಿ ನೇಮಿಸುವ ಕುರಿತ ಧಾರ್ಮಿಕ ದತ್ತಿ ಇಲಾಖೆಯ ಆದೇಶವನ್ನು ರದ್ದು ಮಾಡಿರುವ ಹೈಕೋರ್ಟ್ ತೀರ್ಪಿನಿಂದ ಹಿಂದೂಗಳಿಗೆ ಸಂತೋಷವಾಗಿದೆ. ಇದರಿಂದ ನ್ಯಾಯಾಂಗದ ಮೇಲಿನ ಭರವಸೆಯೂ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಇದನ್ನೂ ಓದಿ : ಶಿರೂರು ಮಠಕ್ಕೆ ಅಪ್ರಾಪ್ತ ಪೀಠಾಧಿಪತಿ ನೇಮಕ ವಿವಾದ : ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ -Vishwanews24
ದತ್ತ ಪೀಠದ ಕುರಿತ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ದತ್ತ ಪೀಠದ ಪೂಜೆಗೆ ಹಿಂದು ಅರ್ಚಕರ ನೇಮಕವನ್ನು ಎತ್ತಿಹಿಡಿದಿದೆ ಹೈಕೋರ್ಟ್. ದಶಕಗಳಿಂದ ಹೋರಾಟ ನಡೆಸಿಕೊಂಡು ಬಂದ ಭಕ್ತಾದಿ/ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಸಂಸದ ಬಿವೈ ರಾಘವೇಂದ್ರ ಟ್ವೀಟ್ ಮಾಡಿದ್ದಾರೆ.
ಚಿಕ್ಕಮಗಳೂರಿನ ಪವಿತ್ರ ದತ್ತಪೀಠ ಹೋರಾಟಕ್ಕೆ ಹಿಂದೂಗಳಿಗೆ ಮೊದಲ ಗೆಲುವು ಸಿಕ್ಕಿದೆ. ಪುರಾತನ ದತ್ತಪೀಠಕ್ಕೆ ಹಿಂದಿನ ಸರ್ಕಾರ ನೇಮಿಸಿದ್ದ ಮೌಲ್ವಿ ನೇಮಕವನ್ನು ರದ್ದುಗೊಳಿಸುವಂತೆ ರಾಜ್ಯ ಹೈಕೋರ್ಟ್ ಆದೇಶಿಸಿದೆ. ಹಿಂದೂಗಳ ಭಾವನೆಗೆ ಬೆಲೆ ಕೊಟ್ಟ ನ್ಯಾಯಾಲಯಕ್ಕೆ ಧನ್ಯವಾದಗಳು. ದತ್ತಪೀಠ ನಮ್ಮದೆ… ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ದತ್ತ ಭಕ್ತರ ದಶಕಗಳ ಹೋರಾಟಕ್ಕೆ ಹೈಕೋರ್ಟಿನಲ್ಲಿ ಜಯ. ದತ್ತಪೀಠ ಪೂಜೆಗೆ ಮೌಲ್ವಿ ನೇಮಕ ರದ್ದು ಮಾಡಿದ ಹೈಕೋರ್ಟಿನ ತೀರ್ಪನ್ನು ಸ್ವಾಗತಿಸುತ್ತೇನೆ. ಸತ್ಯಮೇವ ಜಯತೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ಶಿರಾಡಿ ರಸ್ತೆ ಎಲ್ಲಾ ಬಗೆಯ ವಾಹನ ಸಂಚಾರಕ್ಕೆ ಅವಕಾಶ -Vishwanews24
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…