ದಕ್ಷಿಣ ಕನ್ನಡ

ಹಿಂದೂ ಅಂತಾ ವಂಚಿಸಿ ಮದುವೆ: ನಿಜ ತಿಳಿದು ಪತ್ನಿಯಿಂದ್ಲೇ ಬಿತ್ತು ಗೂಸಾ

ಉಳ್ಳಾಲ: ಹಿಂದೂ ಹೆಸರಿನಲ್ಲಿ ಕುಂಪಲದ ಯುವತಿಯನ್ನು ಮದುವೆಯಾಗಿದ್ದ ಸುಳ್ಯ ಮೂಲದ ಮಹಮ್ಮದ್‌ ಹಾರೂನ್‌ ಯಾನೆ ಬಶೀರ್‌(28)ಗೆ  ಯುವತಿ ಮನೆಯವರು ಮತ್ತು ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ಬುಧವಾರ ನಡೆದಿದ್ದು, ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ದೂರವಾಣಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಹಾರೂನ್‌ ಮೂರು ವರ್ಷಗಳ ಹಿಂದೆ ಪರಿಚಯವಾಗಿದ್ದ ತನಗಿಂತ ಸುಮಾರು 12 ವರ್ಷ ಹೆಚ್ಚು ಪ್ರಾಯದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ತಾನು ಅರುಣ್‌ ಪೂಜಾರಿ ಎಂದು ಕುಂಪಲದಲ್ಲಿ ಹೇಳಿಕೊಂಡಿದ್ದ ಈತನ ನಿಜ ಬಣ್ಣ ಏಳು ತಿಂಗಳ ಹಿಂದೆ ಬಯಲಾಗಿತ್ತು. ಯುವತಿಯ ಸಹೋದರಿ ಬ್ಯಾಗ್‌ ಚೆಕ್‌ ಮಾಡಿದಾಗ ಈತನ ನಿಜ ಹೆಸರು ಪತ್ತೆಯಾಗಿತ್ತು. ಆವರೆಗೆ ತಾನು ಅನಾಥ ಎಂದು ತಿಳಿಸಿದ್ದ. ಈ ಸಂದರ್ಭದಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಈತನ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಘಟನೆ ಬಳಿಕ ಯುವತಿಯೊಂದಿಗೆ ಸಂಪರ್ಕ ಇರಲಿಲ್ಲ ಎನ್ನಲಾಗಿದ್ದು,  ಬುಧವಾರ ಏಕಾಏಕಿ ಹಾರೂನ್‌ ಯುವತಿ ಮನೆಗೆ ತೆರಳಿ 60 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದು, ಈ ಸಂದರ್ಭದಲ್ಲಿ ಯುವತಿಯ ಸಹೋದರಿ ಹಾರೂನ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಆಗ ಸ್ಥಳೀಯರೂ ಹಾರೂನ್‌ಗೆ ಧರ್ಮದೇಟು ನೀಡಿ ಬಳಿಕ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.

ಹಾರೂನ್‌ನ ಹುಡುಗಿಯ ಚಾಳಿಯಿಂದ ಆತನ ಮನೆಯವರೂ ಈತನನ್ನು ಮನೆಗೆ ಸೇರಿಸಿಕೊಂಡಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

5 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

5 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

5 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

5 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago