ಧಾರವಾಡ: ಹಿಂದೂ ಪದವನ್ನು ತಂದಿದ್ದೇ ಕಾಂಗ್ರೆಸ್ ಪಕ್ಷ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆದ ತೊಗಲು ಬೊಂಬೆಯಾಟ ಉತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ವೇಳೆ ಹಿಂದೂ ಎಂಬ ಪದವನ್ನು ತಂದಿದ್ದೇ ಕಾಂಗ್ರೆಸ್ ಪಕ್ಷ. ಈ ದೇಶದಲ್ಲಿ ಹಿಂದೂ ಎಂಬ ಪದವೇ ಇರಲಿಲ್ಲ. ಡಾ.ಅಂಬೇಡ್ಕರ್ ಹಿಂದೂ ಕೋಡ್ ಬಿಲ್ ತರದೇ ಇದ್ದಿದ್ರೆ ನಾವು ಹೀಗೆ ಇರುತ್ತಿರಲಿಲ್ಲ ಎಂದಿದ್ದಾರೆ.
ಹಿಂದೂ ಕೋಡ್ ಬಿಲ್ ತರದೇ ಇದ್ದಿದ್ರೆ ಶೂದ್ರರನ್ನು ಕರೆಯಿರಿ, ಬ್ರಾಹ್ಮಣ, ವೈಷ್ಯರನ್ನು ಕರೆಯಿಸಿ ಎಂಬ ವ್ಯವಸ್ಥೆ ಇರುತ್ತಿತ್ತು. ಇತಿಹಾಸವನ್ನು ಜನ ಓದುವುದಿಲ್ಲ. ಮಾಧ್ಯಮಗಳ ಮೂಲಕ ಸುಳ್ಳು ಹೇಳುವುದೇ ಇವತ್ತಿನ ರಾಜಕಾರಣದಲ್ಲಿ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿಯವರು ಮಾತನಾಡ್ತಾರೆ. ನಮ್ಮ ಬಗ್ಗೆ ಹಿಗ್ಗಾಮುಗ್ಗಾ ಇಲ್ಲಸಲ್ಲದ ವಿಚಾರ ಮಾತಾಡ್ತಾರೆ. ಜನರು ಸಹ ಕಾಂಗ್ರೆಸ್ ಪಕ್ಷವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ಕಾಂಗ್ರೆಸ್ ಪಕ್ಷವನ್ನು ಹಿಂದೂಗಳು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ
ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ ಉಡುಪಿ : ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ…
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…