ಬೆಂಗಳೂರು: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ 50ಕ್ಕೂ ಹೆಚ್ಚು ಮಂದಿ ಮಠಾಧೀಶರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ.
ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪ್ರಿಯಾಂಕ್ ಖರ್ಗೆ ದಬ್ಬಾಳಿಕೆ ಹೆಚ್ಚುತ್ತಿದೆ. ಅಲ್ಲದೆ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿ ಬಂಜಾರ ಮಠ ಹಾಗೂ ವೀರಶೈವ ಮಠಾಧೀಶರು ದೂರು ನೀಡಿದ್ದಾರೆ.
ಈಗಾಗಲೇ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವರ ವಿರುದ್ದ ಪ್ರಿಯಾಂಕ್ ಖರ್ಗೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ಅಧಿಕಾರಿ ಅಲೋಕ್ಕುಮಾರ್ ಅವರು ಪ್ರಿಯಾಂಕ್ ಖರ್ಗೆ ಹೇಳಿದಂತೆಯೇ ಮಾಡುತ್ತಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೆ ದಾಖಲಿಸಿದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಬೇಕು. ಅಲ್ಲದೆ ಈ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಕಾರ್ಯಕರ್ತರ ಮೇಲಾಗುತ್ತಿರುವ ದೌರ್ಜನ್ಯವನ್ನು ತಡೆಗಟ್ಟಿ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಸಿಎಂಗೆ ಮನವಿ ಸಲ್ಲಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…