ಉಪವಲಯ ಅರಣ್ಯ ಅಧಿಕಾರಿಯಾಗಿರುವ ಸಂಜೀವ ಪೂಜಾರಿ ಕಾಣೆಯೂರು ಎಂಬ ವ್ಯಕ್ತಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂಳೆಯರಾಗಿದ್ದಾರೆ ಎಂಬುದು ನನ್ನ ಬಳಿ ದಾಖಲೆ ಇದೆ ಎಂಬ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು ಭಜನೆಗೆ ಹೋಗುತ್ತಿರುವಂತಹ ಹೆಣ್ಣು ಮಕ್ಕಳ ಬಗ್ಗೆ ಅಸಹ್ಯವಾಗಿ ಮಾತನಾಡಿರುತ್ತಾರೆ.
ತನ್ನ ಮನೆಯ ಹೆಣ್ಣು ಮಕ್ಕಳನ್ನು ಅಸಹ್ಯ ರೀತಿಯಲ್ಲಿ ನೋಡುವ ಮನಸ್ಥಿತಿ ಇರುವಂತಹ ವ್ಯಕ್ತಿತ್ವ ಹೊಂದಿರುವ ವ್ಯಕ್ತಿಯಿಂದ ಮಾತ್ರ ಇಂತಹ ಮಾತುಗಳು ಬರುವಂತಹದ್ದು ಒಬ್ಬ ಸರಕಾರಿ ಉನ್ನತ ಮಟ್ಟದ ಹುದ್ದೆಗಳಲ್ಲಿ ಇರುವಂತಹ ವ್ಯಕ್ತಿಯ ನಾಲಗೆಯಲ್ಲಿ ಇಂತಹ ಮಾತುಗಳು ಸಂಸ್ಕಾರ ಹೀನ ಮಾತುಗಳು ಬರುವುದು ಶೋಭೆಯಲ್ಲ.
ಹಿಂದೂ ಸಂಸ್ಕೃತಿಯಲ್ಲಿ ಸ್ತ್ರೀ ಯನ್ನು ಮಾತೆಯ ರೂಪದಲ್ಲಿ ನೋಡಿರುವುದು ಹೊರತು ಇವರಂತಹ ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ವ್ಯಕ್ತಿಯ ಬಳಿ ಹೇಳಿಸಿಕೊಳ್ಳುವ ಪರಿಸ್ಥಿತಿ ನಮ್ಮ ಹಿಂದೂ ಸಮಾಜಕ್ಕೆ ಬಂದಿಲ್ಲ ಬಿಲ್ಲವ ಸಮಾಜದ ಮಾತೃಶಕ್ತಿ ಮತ್ತು ಭಜನಾ ಮಂಡಳಿಯ ಮಾತೃ ಶಕ್ತಿಗೆ ಮಾಡಿದ ಅವಮಾನಕ್ಕೆ ಹಾಗೂ ಹೆಣ್ಣು ಮಕ್ಕಳ ಚಾರಿತ್ರ್ಯವನ್ನು ವದೆ ಮಾಡಿರುವುದು ತೀವ್ರ ಖಂಡನೀಯ ಈತನ ವಿರುದ್ಧ ಪೊಲೀಸ ಇಲಾಖೆ ಸುಮೋಟೋ ಕೇಸ್ ಅನ್ನು ದಾಖಲಿಸಿ ಕೂಡಲೇ ಬಂಧಿಸಬೇಕು ಹಾಗೂ ಸರಕಾರ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಸರಕಾರ ಕೆಲಸದಿಂದ ವಜಾ ಮಾಡಿ ಬಿಲ್ಲವ ಸಮಾಜದ ಹೆಣ್ಣು ಮಕ್ಕಳಿಗೆ ನ್ಯಾಯವನ್ನು ಒದಗಿಸಬೇಕೆಂದು ಆಗ್ರಹಿಸುತ್ತೇನೆ ಇಲಾಖೆಯು ಈತನ ಮೇಲೆ ಕಾನೂನು ಕ್ರಮವನ್ನು ತೆಗೆದುಕೊಳ್ಳದೆ ಆತನನ್ನು ಬಂಧಿಸದೆ ಬಿಟ್ಟರೆ ಹಿಂದೂ ಸಮಾಜದ ಹೆಣ್ಣು ಮಕ್ಕಳು ನೇರ ಆತನಿಗೆ ಪೂರಕ್ಕೆ ಕl ಸೇವೆ ಮಾಡಬೇಕಾಗಿತ್ತು ಎಚ್ಚರಿಕೆ ಎಂದು ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರ ಅವರು ತಿಳಿಸಿದ್ದಾರೆ
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…