Featured

ಹಿಂದೂ ದೇವಾಲಯಗಳ ಹಣ  ಹಿಂದೂ ಧರ್ಮವನ್ನು ಹೊರತುಪಡಿಸಿ ಅನ್ಯ ಉದ್ದೇಶಗಳ ಬಳಕೆಗೆ ತಡೆ : ಸಚಿವ ಕೋಟ ಆದೇಶ – Vishwanews 24

ಹಿಂದೂ ದೇವಾಲಯಗಳ ಹಣ  ಹಿಂದೂ ಧರ್ಮವನ್ನು ಹೊರತುಪಡಿಸಿ ಅನ್ಯ ಉದ್ದೇಶಗಳ ಬಳಕೆಗೆ ತಡೆ : ಸಚಿವ ಕೋಟ ಆದೇಶ – Vishwanews 24

ದ . ಕ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಮಾಧ್ಯಮದ ಮೂಲಕ ಹೇಳಿಕೆಯೊಂದನ್ನು ನೀಡಿದ್ದು, ರಾಜ್ಯದಲ್ಲಿ ನಮ್ಮ ಸರಕಾರ ಬರುವ ಮುಂಚೆ ಇಲಾಖೆಯ ಮೂಲಕ ಮಂಜೂರಾಗುತ್ತಿರುವ ತಸ್ತೀಕ್ ಹಣ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಕೂಡ ಬಿಡುಗಡೆ ಮಾಡುತ್ತಿರುವ ಬಗ್ಗೆ ಮಾಹಿತಿ ಒದಗಿದ್ದು, ತಕ್ಷಣ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ಮೂಲಕ ಹಿಂದೂ ಧರ್ಮವನ್ನು ಹೊರತುಪಡಿಸಿ ಅನ್ಯ ಉದ್ದೇಶಗಳಿಗೆ ಬಳಸುತ್ತಿರುವುದನ್ನು ತಡೆಹಿಡಿಯಲು ಸೂಚಿಸಿದ್ದಾರೆ.

ಇತರೆ ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳಿಗೆ ಹಣದ ಅವಶ್ಯಕತೆಯಿದ್ದಲ್ಲಿ, ಆಯಾಯ ಇಲಾಖೆಯ ಜವಾಬ್ದಾರಿ ಹಾಗೂ ಆಯಾ ಇಲಾಖೆಯ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದವರು ತಿಳಿಸಿದ್ದಾರೆ.

ರಾಜ್ಯದಲ್ಲಿ 27ಸಾವಿರಕ್ಕೂ ಹೆಚ್ಚು ಹಿಂದೂ ದೇವಸ್ಥಾನಗಳಿಗೆ ತಸ್ತೀಕ್ ನೀಡಲಾಗುತ್ತಿದ್ದು, ಸುಮಾರು 133 ಕೋಟಿ ರೂಪಾಯಿ ಸರಕಾರ ವಾರ್ಷಿಕ ಅನುದಾನ ಹಂಚುತ್ತಿದೆ. ಈ ಪೈಕಿ ಸುಮಾರು 764 ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳು ಇಲಾಖೆಯಿಂದ ತಸ್ತೀಕ್ ಪಡೆಯುತ್ತಿದ್ದು, ಮಂತ್ರಿಗಳ ಸೂಚನೆ ಮೇರೆಗೆ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಹಣ ಬಿಡುಗಡೆ ಮಾಡುವುದನ್ನು ನಿಲ್ಲಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago