ರಾಜ್ಯ ನ್ಯೂಸ್

ಹಿಂದೂ ಧರ್ಮಕ್ಕೆ ಕಳಂಕ ತಂದ ಕಾಂಗ್ರೆಸ್ ಗೆ ಜನ ಬುದ್ದಿ ಕಲಿಸಬೇಕು: ಅಮಿತ್ ಶಾ

ಬೆಂಗಳೂರು: ಹಿಂದೂ ಭಯೋತ್ಪಾದನೆ– ಕೇಸರಿ ಭಯೋತ್ಪಾದನೆ’ ಎಂದು ಹೇಳುವ ಮೂಲಕ ಕಾಂಗ್ರೆಸ್‌ ನಾಯಕರು ಹಿಂದೂ ಧರ್ಮದ ಪಾವಿತ್ರ್ಯವನ್ನು ಹಾಳು ಮಾಡುತ್ತಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ. ಹಿಂದೂ ಧರ್ಮಕ್ಕೆ ಭಯೋತ್ಪಾದನೆಯ ಕಳಂಕ ಅಂಟಿಸಿದ ಕಾಂಗ್ರೆಸ್‌ ಗೆ  ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ನಡೆದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ  ಮಾತನಾಡಿದ ಅವರು, ಮೆಕ್ಕಾ ಮಸೀದಿ ಬಾಂಬ್‌ ಸ್ಫೋಟದ ಆರೋಪಿಗಳನ್ನು ನಿರ್ದೋಷಿಗಳೆಂದು ನ್ಯಾಯಾಲಯ ಬಿಡುಗಡೆ ಮಾಡಿದೆ. ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಕಾಂಗ್ರೆಸ್‌ ಪಕ್ಷ  ಹಿಂದೂ ಧರ್ಮವನ್ನು ಎಳೆದು ತಂದಿತು. ಧರ್ಮ ಮತ್ತು ಸಂಸ್ಕೃತಿಗೆ ಅವಮಾನ ಮಾಡಿದ ಕಾರಣಕ್ಕೆ ಕರ್ನಾಟಕದ ಜನತೆ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಮನೆ ಬಾಗಿಲಿಗೆ ಮತ ಕೇಳಲು ಬರುವ ಕಾಂಗ್ರೆಸ್ ನಾಯಕರನ್ನು ಈ ಬಗ್ಗೆ ಪ್ರಶ್ನಿಸಬೇಕು ಎಂದು ಶಾ ಹೇಳಿದರು.
ಬಿಜೆಪಿಯ ವಿಜಯರಥ ಕರ್ನಾಟಕ ತಲುಪಿದೆ. ಇಲ್ಲಿ ಪಕ್ಷ ವಿಜಯ ಸಾಧಿಸಲಿದೆ. ಇದರಿಂದ ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಮತ್ತು ತೆಲಂಗಾಣಕ್ಕೆ ದಾರಿ ಮಾಡಲಿದೆ ಎಂದು ಶಾ ತಿಳಿಸಿದರು.
ಭಯೋತ್ಪಾದನೆಗೆ ಯಾವುದೇ ಧರ್ಮ, ಜಾತಿ ಇರುವುದಿಲ್ಲ. ಭಯೋತ್ಪಾದನೆಯೇ ಖಂಡನಾರ್ಹ. ಇದನ್ನು ಅರಿಯದೇ ಹಿಂದೂ ಭಯೋತ್ಪಾದನೆ ಎಂದು ಹೇಳಿಕೆ ನೀಡುವುದು ಸರಿಯಲ್ಲ. ಇನ್ನಾದರೂ ಅವರು ಇಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದರು.
Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

11 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

13 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

13 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

14 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

14 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

14 hours ago