Featured

ಹಿಂದೂ ಧರ್ಮಕ್ಕೆ ಮತಾಂತರವಾದ ಮುಸ್ಲಿಂ ಕುಟುಂಬ ; ಪೊಲೀಸ್‌ ಕ್ರಮದ ವಿರುದ್ಧ ನೊಂದು ಹಿಂದು ಧರ್ಮ ಸ್ವೀಕರ..

ಉತ್ತರ ಪ್ರದೇಶ : ಮಗನ ಅಸ್ವಾಭಾವಿಕ ಸಾವನ್ನು ಆತ್ಮಹತ್ಯೆ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡ ಕಾರಣಕ್ಕೆ ತೀವ್ರವಾಗಿ ಮನನೊಂದ ಮುಸ್ಲಿಂ ಕುಟುಂಬವೊಂದು ಹಿಂದು ಧರ್ಮಕ್ಕೆ ಮತಾಂತರಗೊಂಡ ಘಟನೆ ನಡೆದಿದೆ.

ಭದ್ರಾರ್ಕಾ ಎನ್ನುವ ಹಳ್ಳಿಯ ಅಖ್ತರ್‌ ಎನ್ನುವವರು ಕುಟುಂಬದ 12 ಮಂದಿಯೊಂದಿಗೆ ಹಿಂದೂ ಧರ್ಮ ಸ್ವೀಕರಿಸಿದ್ದಾರೆ. ಮಾತ್ರವಲ್ಲದೆ ಧರ್ಮವನ್ನು ಬದಲಿಸಬೇಕು ಎಂದು ಸಬ್‌ ಡಿವಿಷನಲ್‌ ಮ್ಯಾಜಿಸ್ಟ್ರೇಟ್‌ಗೆ ಅಫಿದವಿತ್‌ ಸಲ್ಲಿಸಿದ್ದಾರೆ.

ನಾವು ಧರ್ಮವನ್ನು ಬದಲಾಯಿಸುವುದರಿಂದ ಪೊಲೀಸರು ನಿಷ್ಪಕ್ಷಪಾತ  ತನಿಖೆ ನಡೆಸಬಹುದು ಎಂದು ಅಖ್ತರ್‌ ಮಾಧ್ಯಮಗಳೆದುರು ಆಕ್ರೋಶ ಹೊರ ಹಾಕಿದ್ದಾರೆ.

‘ನನ್ನ  ಪುತ್ರ ಗುಲ್‌ಹಸನ್‌ ಅವರು ಕೊಲೆಯಾಗಿದ್ದು, ಪೊಲೀಸರು ಆತ್ಮಹತ್ಯೆ ಎಂದು ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ’ ಎನ್ನುವುದು ಅಖ್ತರ್‌ ಅವರ ಆರೋಪವಾಗಿದ್ದು, ಮತಾಂತರವಾಗುವ ನ್ಯಾಯ ಪಡೆಯುವ ವಿಶ್ವಾಸ ಅವರದ್ದು.

ಮುಸ್ಲಿಂ ಕುಟುಂಬ ಕೇಸರಿ ಪಟ್ಟಿಗಳನ್ನು ಹಣೆಗೆ ಕಟ್ಟಿಕೊಂಡು ಜೈ ಶ್ರೀರಾಮ್‌ ಎಂಬ ಘೋಷಣೆಗಳನ್ನು ಕೂಗುತ್ತಾ   ಹಿಂದು ಧರ್ಮ ಸ್ವೀಕರಿಸಿದ್ದು ,ಅವರನ್ನು ಹಿಂದೂ ಪರ ಸಂಘಟನೆಯ ಸದಸ್ಯರು ತಿಲಕವಿಟ್ಟು ಬರಮಾಡಿಕೊಂಡಿದ್ದಾರೆ.ಬಳಿಕ ಹವನ ಮಾಡಿಸಿ ಮತ್ತು ಹನುಮಾನ್‌ ಚಾಲೀಸಾವನ್ನು ಪಠಿಸಲಾಗಿದೆ.

ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿರುವುದು ಹೊಸ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.

 

 

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

3 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

3 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

4 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

6 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

7 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

7 hours ago