Featured

ಹಿಂದೂ ಧರ್ಮವನ್ನು ನಾಶಮಾಡಲು ಮೋದಿ ಇರುವವರೆಗೂ ಸಾಧ್ಯವಿಲ್ಲ : ಮೈಸೂರಿನಲ್ಲಿ ಪ್ರಧಾನಿ – Vishwanews24

ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ಹುನ್ನಾರ – ಮೋದಿ ಇರುವವರೆಗೂ ಸಾಧ್ಯವಿಲ್ಲ : ಮೈಸೂರಿನಲ್ಲಿ ಪ್ರಧಾನಿ

ಮೈಸೂರು: ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ನವರು ಹುನ್ನಾರ ನಡೆಸಿದ್ದು ಮೋದಿ ಇರುವವರೆಗೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನ ವಿಜಯಸಂಕಲ್ಪ‌ ಸಮಾವೇಶದಲ್ಲಿ ಮಾತನಾಡಿದ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿ “ನಿಮಗೆಲ್ಲಾ ನನ್ನ ನಮಸ್ಕಾರಗಳು, ಚೈತ್ರ ನವಮಿಯ ದಿನ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ತಾಯಿ ಚಾಮುಂಡೇಶ್ವರಿ ಜೊತೆ, ತಾಯಿ ಭುವನೇಶ್ವರಿ ಮತ್ತು ತಾಯಿ ಕಾವೇರಿಗೆ ನಮಿಸುತ್ತೇನೆ” ಎಂದರು. ಕರ್ನಾಟಕದಲ್ಲಿ ಕಾಂಗ್ರೆಸ್ ತುಷ್ಠೀಕರಣ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ಆಹ್ವಾನವನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ನವರು ಅಪಮಾನ ಮಾಡಿದೆ. ಇಂಡಿ ಮೈತ್ರಿ ಕೂಟವು ಸನಾತನ ಧರ್ಮವನ್ನು ನಾಶ ಮಾಡುತ್ತೇವೆ ಎನ್ನುತ್ತಾರೆ. ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ನವರು ಹುನ್ನಾರ ನಡೆಸಿದ್ದು ಮೋದಿ ಇರುವವರೆಗೂ ಸಾಧ್ಯವಿಲ್ಲ ಎಂದು ಪ್ರಧಾನಿ ಘೋಷಿಸಿದರು.

.ರಾಜ್ಯ ಕಾಂಗ್ರೆಸ್ ಪಕ್ಷದ ಆಡಳಿತ ವೈಖರಿಯನ್ನೂ ತರಾಟೆಗೆ ತೆಗೆದುಕೊಂಡ ಮೋದಿ ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ನಿರಂತರ ವಾಗ್ದಾಳಿ ನಡೆಸಿ, ಬಿಜೆಪಿಯಿಂದ ಮೋದಿಯೇ ಗ್ಯಾರಂಟಿ ಎಂದು ಹೇಳಿದರು. ಇದಕ್ಕೂ ಮೊದಲು ಇಡೀ ಭಾರತದಲ್ಲಿ ಅತ್ಯಂತ ಹೆಚ್ಚು ಅನುಭವಿ ರಾಜಕಾರಣಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಜೊತೆ ವೇದಿಕೆ ಹಂಚಿಕೊಂಡಿರುವುದು ನನ್ನ ಸೌಭಾಗ್ಯ ಅವರು ಹೇಳಿರುವುದನ್ನು ಸಂಪೂರ್ಣವಾಗಿ ಕೇಳಿಸಿಕೊಂಡೆ ಎಂದ ಪ್ರಧಾನಿ ಬಿಜೆಪಿಯಿಂದ ಪ್ರಾದೇಶಿಕ ಅಸ್ಮಿತೆ, ಕನ್ನಡ ಅಸ್ಮಿತೆಗೆ ಧಕ್ಕೆ ಬರುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೂ ತಿರುಗೇಟು ನೀಡಿದ ಅವರು, ಕನ್ನಡವು ಅತ್ಯಂತ ಸುಂದರವಾದ ಭಾಷೆಯಾಗಿದೆ. ಬಿಜೆಪಿ ಸರ್ಕಾರವು ಕನ್ನಡ ಭಾಷೆಯ ಬೆಳವಣಿಗೆಗೆ ಪೂರಕ ಯೋಜನೆಗಳನ್ನು ಹಮ್ಮಿಕೊಳ್ಳಲಿದೆ ಎಂದೂ ತಿಳಿಸಿದರು.

 

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

17 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

18 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

18 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

20 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

20 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

20 hours ago